ಪ್ರತ್ಯೇಕ ಕನರ್ಾಟಕ: ಬೆಂಕಿ ಹಚ್ಚುತ್ತಿರುವುದು ಮಾಧ್ಯಮಗಳು ಸಿಎಂ ಎಚ್ಡಿಕೆ ಕಿಡಿ
ಬೆಂಗಳೂರು 30: ಮಾಧ್ಯಮಗಳಿಂದಾಗಿ ರಾಜ್ಯ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್,.ಡಿ ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರತ್ಯೇಕ ಉತ್ತರ ಕನರ್ಾಟಕ ಕೂಗಿಗೆ ಮಾಧ್ಯಮಗಳೇ ಕಾರಣ. ಉತ್ತರ ಕನರ್ಾಟಕ ವಿಷಯದಲ್ಲಿ ಬೆಂಕಿ ಹಚ್ಚುತ್ತಿರುವವರು ನೀವು. ಪ್ರತಿಯೊಂದು ವಿಷಯದಲ್ಲಿ ತಪ್ಪೇ ಕಾಣಿಸುತ್ತಾ ಹೋದರೆ..ರಾಜ್ಯ ಉದ್ಧಾರವಾಗಬೇಕೋ ಅಥವಾ ರಾಜ್ಯ ಹಾಳಾಗಬೇಕೋ ಅದು ನಿಮಗೆ ಸೇರಿದ್ದು ಎಂಬುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಅಖಂಡ ಕನರ್ಾಟಕ ಎಂಬುದನ್ನು ಮೊದಲೇ ಹೇಳಿದ್ದೇನೆ. ಆದರೆ ಪ್ರತ್ಯೇಕ ಉತ್ತರ ಕನರ್ಾಟಕ ಕೂಗಿಗೆ ಕುಮ್ಮಕ್ಕು ಕೊಟ್ಟವರು ನೀವೇ(ಮಾಧ್ಯಮ) ಎಂದು ಆರೋಪಿಸಿದ್ದಾರೆ. ಉತ್ತರ ಕನರ್ಾಟಕದ ಬಗ್ಗೆ ನಾನು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೆ ಮಾಧ್ಯಮಗಳಲ್ಲಿ ಇದರ ಬಗ್ಗೆಯೇ ಪದೇ, ಪದೇ ಚಚರ್ೆ ನಡೆಸಲಾಗುತ್ತಿದೆ ಎಂದು ದೂರಿದರು.
ಉತ್ತರ ಕನರ್ಾಟಕದ ಜನ ನನ್ನ ಜೊತೆ ಇದ್ದಾರೆ ಮಾಧ್ಯಮದವರು ಪ್ರತಿದಿನ ನನ್ನನ್ನು ಟಾಗರ್ೆಟ್ ಮಾಡಿ ಸುದ್ದಿ ಪ್ರಸಾರ ಮಾಡಿ ಬೆಂಕಿ ಹಚ್ಚುತ್ತಿದ್ದಾರೆ. ಚನ್ನಪಟ್ಟಣದಲ್ಲಿ ನಾನು ಏನು ಹೇಳಿದೆ. ಸದನದಲ್ಲಿ ಶ್ರೀರಾಮುಲು ಚಚರ್ಿಸಿದ ವಿಷಯವನ್ನು ನಾನು ಮಾತನಾಡಿದೆ, ರಾಜ್ಯದ ಅಭಿವೃದ್ಧಿಗೆ ಎಲ್ಲಿ ಹಣ ತರುತ್ತಾರೆ ಎಂಬ ಬಗ್ಗೆ ಚಚರ್ಿಸಿದ ವಿಷಯವನ್ನು ನಾನು ಮಾತನಾಡಿದೆ, ನಾನು ಏನು ಹೇಳಿಯೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 