ಪ್ರತ್ಯೇಕ ಪ್ರಕರಣ: ನೀರಿನಲ್ಲಿ ಮುಳುಗಿ ಯುವಕ, ಮಹಿಳೆ ಸಾವು
ಮೈಸೂರು/ಬೆಳಗಾವಿ, ಅ 14: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ನೀರಿನಲ್ಲಿ ಮುಳುಗಿ ಯುವಕ ಹಾಗೂ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ನೀರು ತರಲು ಹೋಗಿದ್ದಾಗ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೂಡ್ಲುರು ಎಂಬಲ್ಲಿ ವರದಿಯಾಗಿದೆ. 19 ವರ್ಷದ ಧನುಶ್ ಮೃತ ದುದರ್ೆವಿ. ಸೋದರಮಾವನ ತಿಥಿ ಕಾರ್ಯಕ್ಕೆ ಬಂದಿದ್ದ ಧನುಶ್, ಸಮಾಧಿ ಸ್ವಚ್ಛಗೊಳಿಸಲು ನೀರು ತರಲು ಲಕ್ಷ್ಮಣ ತೀರ್ಥ ನದಿಗೆ ತೆರಳಿದ್ದಾಗ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮಕ್ಕಳಿಗೆ ಈಜು ಕಲ್ಲಿಸುತ್ತಿದ್ದ ವೇಳೆ ತಾಯಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ಸಂಭವಿಸಿದೆ. ಶಿಲ್ಪಾ ಚನ್ನಗೌಡರ ಎಂಬುವವರು ತಮ್ಮ ಮಕ್ಕಳಿಗೆ ಈಜು ಕಲಿಸುತ್ತಿದ್ದರು. ಈ ವೇಳೆ ಮೂರ್ಚೆ ಬಂದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂರ್ಚೆ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ನೀರಿನಲ್ಲಿದ್ದಾಗಲೇ ಮೂರ್ಚೆ ಬಂದು ಇಹಲೋಕ ತ್ಯಜಿಸಿದ್ದಾರೆ. ತಾಯಿ ಮುಳುಗುವ ವೇಳೆ ಮಕ್ಕಳು ಜೋರಾಗಿ ಕೂಗಾಡಿದ್ದರು. ಸ್ಥಳೀಯರು ಸ್ಥಳಕ್ಕಾಗಮಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಜರು ಮಾಡಿ ತನಿಖೆ ಮುಂದುವರೆಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 