ಪ್ರತ್ಯೇಕ ಕರೋನ ಬಜೆಟ್ ಮಂಡನೆ, ಬಾಂಡ್ ಬಿಡುಗಡೆಗೆ ಆಗ್ರಹ
ನವದೆಹಲಿ, ಏ 27,ದೇಶದ ಆರ್ಥಿಕತೆ ಮೇಲೆ ಕೊರೊನಾ ಸೋಂಕು ತೀವ್ರ ಬಹಳ ಪರಿಣಾಮ ಬೀರಿದೆ , ಭಾರೀ ಪ್ರಮಾಣದಲ್ಲಿ ಆರ್ಥಿಕ ಉದ್ಯೋಗ ನಷ್ಟವುಂಟಾಗಿದೆ. ಈ ಸಮಸ್ಯೆಯಿಂದ ಪಾರಾಗಲು ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಅಮೆರಿಕಾ-ಭಾರತ ವ್ಯಾಪಾರ ಮಂಡಳಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಅತನು ಚಕ್ರವರ್ತಿ ಅವರಿಗೆ ಮತ್ತು ಆರ್ಥಿಕ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅಧಿಕಾರಿಗಳ ತಂಡಕ್ಕೆ ಸಲ್ಲಿಸಿರುವ ವರದಿಯಲ್ಲಿ ಈ ಸಲಹೆ ನೀಡಲಾಗಿದೆ.ಹೆಚ್ಚುವರಿಯಾಗಿ ವೆಚ್ಚ ಭರಿಸಲು ಮತ್ತು ಹಣ ಸಂಗ್ರಹ ಮಾಡಲು ಸರ್ಕಾರ ದೇಶಿ ಮಾರುಕಟ್ಟೆಯಲ್ಲಿ ತೆರಿಗೆ ಮುಕ್ತ ಕರೋನ ಬಾಂಡ್ ಗಳನ್ನು ಬಿಡುಗಡೆ ಮಾಡುವಂತೆಯೂ ಸೂಚಿಸಲಾಗಿದೆ. ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಲದ ನೆರವು , ಆರೋಗ್ಯ ಕ್ಷೇತ್ರದ ಸಂಸ್ಥೆಗಳಿಗೆ ಹಣಕಾಸು ನೆರವು, ರೈತರ ಆದಾಯ ಹೆಚ್ಚಿಸಲು ಅಲ್ಪಾವಧಿ ದೀರ್ಘಾವಧಿ ಕ್ರಮ, ವಿಮಾನಯಾನ ವಲಯಕ್ಕೆ ಅಗತ್ಯ ಬೆಂಬಲ, ಸಾಲ ದೇಶಿ ಕೈಗಾರಿಕಾ ವಲಯದ ಸುಸ್ಥಿರತೆಗೆ ವೇತನ ಪಾವತಿ ಮತ್ತು ಉದ್ಯೋಗ ಉಳಿಸಿಕೊಳ್ಳಲು ಕಂಪನಿಗಳಿಗೆ ಅಗತ್ಯ ನೆರವು ನೀಡುವ ಕುರಿತು ಅನೇಕ ಸಲಹೆ ನೀಡಲಾಗಿದೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 