ಸರಣಿ ಅಪಘಾತ: ಮೂವರಿಗೆ ಗಾಯ
ಬೆಂಗಳೂರು, ಫೆ 10 : ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಯಶವಂತಪುರ ರೈಲು ನಿಲ್ದಾಣದ ಬಳಿ ಸಂಭವಿಸಿದೆ.
ಕುಡಿದ ಮತ್ತಿನಲ್ಲಿದ್ದ ಮಿನಿ ಬಸ್ ಚಾಲಕನೋರ್ವ ರಸ್ತೆ ಬದಿಯಲ್ಲಿದ್ದ ಆಟೋಗಳಿಗೆ ಡಿಕ್ಕಿ ಹೊಡೆದು ಅವಾಂತರ ಸೃಷ್ಟಿಸಿದ್ದಾನೆ.
ಗೊರೆಗುಂಟೆ ಪಾಳ್ಯ ಕಡೆಯಿಂದ ಸಿಟಿ ಕಡೆಗೆ ಬರುತ್ತಿದ್ದ ಮಿನಿ ಬಸ್ಸು ಚಾಲಕ ವೆಂಕಟಸ್ವಾಮಿ, ಕುಡಿದ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂರು ಆಟೋಗಳು ಜಖಂ ಆಗಿದ್ದು ಚಾಲಕರಿಗೆ ತಲೆ, ಕಾಲು, ಕೈ ಭಾಗಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅದೃಷ್ಟವಶಾತ್ ಬಸ್ಸಿನಲ್ಲಿ ಯಾರೂ ಇರದ ಪರಿಣಾಮ ಅನಾಹುತವೊಂದು ತಪ್ಪಿದಂತಾಗಿದೆ. ಚಾಲಕ ವೆಂಕಟ ಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 