ಸರಣಿ ಅಪಘಾತ: ಮೂವರಿಗೆ ಗಾಯ
ಬೆಂಗಳೂರು, ಫೆ 10 : ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಯಶವಂತಪುರ ರೈಲು ನಿಲ್ದಾಣದ ಬಳಿ ಸಂಭವಿಸಿದೆ.
ಕುಡಿದ ಮತ್ತಿನಲ್ಲಿದ್ದ ಮಿನಿ ಬಸ್ ಚಾಲಕನೋರ್ವ ರಸ್ತೆ ಬದಿಯಲ್ಲಿದ್ದ ಆಟೋಗಳಿಗೆ ಡಿಕ್ಕಿ ಹೊಡೆದು ಅವಾಂತರ ಸೃಷ್ಟಿಸಿದ್ದಾನೆ.
ಗೊರೆಗುಂಟೆ ಪಾಳ್ಯ ಕಡೆಯಿಂದ ಸಿಟಿ ಕಡೆಗೆ ಬರುತ್ತಿದ್ದ ಮಿನಿ ಬಸ್ಸು ಚಾಲಕ ವೆಂಕಟಸ್ವಾಮಿ, ಕುಡಿದ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂರು ಆಟೋಗಳು ಜಖಂ ಆಗಿದ್ದು ಚಾಲಕರಿಗೆ ತಲೆ, ಕಾಲು, ಕೈ ಭಾಗಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅದೃಷ್ಟವಶಾತ್ ಬಸ್ಸಿನಲ್ಲಿ ಯಾರೂ ಇರದ ಪರಿಣಾಮ ಅನಾಹುತವೊಂದು ತಪ್ಪಿದಂತಾಗಿದೆ. ಚಾಲಕ ವೆಂಕಟ ಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 