ಸೇವಾ ಭದ್ರತೆಗೆ ಒಪ್ಪಿಗೆ: ಪೌರ ನೌಕರರ ಮುಷ್ಕರ ಹಿಂದಕ್ಕೆ
Service security agreed: Civic employees' strike called off
ಸೇವಾ ಭದ್ರತೆಗೆ ಒಪ್ಪಿಗೆ: ಪೌರ ನೌಕರರ ಮುಷ್ಕರ ಹಿಂದಕ್ಕೆ
ಶಿಗ್ಗಾವಿ 31: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ಇಟ್ಟಿರುವ 19 ಬೇಡಿಕೆಗಳಾದಂತಹ ಕೆಜಿಐಡಿ ಮತ್ತು ಮುನ್ಸಿಪಲ್ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿ ಸೇವಾ ಭದ್ರತೆನೀಡಲಾಗುವುದು ಎಂದು ಪೌರಾಡಳಿತ ಸಚಿವರ ಆಪ್ತ ಕಾರ್ಯದರ್ಶಿ ಲಿಖಿತವಾಗಿ ನೀಡಿದ ಮೇಲೆ ಮುಷ್ಕರವನ್ನು ಹಿಂಪಡೆಯಲಾಯಿತು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಸಂಕೀರ್ಣದಲ್ಲಿರುವ ಅಂಬೇಡ್ಕರ ಪುತ್ತಳಿಗೆ ಹಾಗೂ ಕಿತ್ತೂರಾಣಿ ಚೆನ್ನಮ್ಮ ಪುತ್ತಳಿಗೆ ಮಾಲಾರೆ್ಣ ಮಾಡಿ ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ನಮ್ಮ ಧರಣಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಕ.ರಾ.ಪೌ.ನೌ.ಸಂಘದ ಅಧ್ಯಕ್ಷೆ ಶೈಲಜಾ ಹೆಚ್ ಪಾಟೀಲ ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ, ಕಂದಾಯ ಅಧಿಕಾರಿ ಅಮೀತ, ವ್ಯವಸ್ಥಾಪಕಿ ಮಂಗಳಗೌರ ಪಾಟೀಲ, ರಾಜೇಶ ಕಹಾರ, ಗಿರಿಜಮ್ಮ ಕಮಡೊಳ್ಳಿ, ಯಲ್ಲಪ್ಪ ಹಾದಿಮನಿ, ಮಂಜುನಾಥ ಕಟ್ಟಿಮನಿ, ಪ್ರಶಾಂತ ರಾಠೋಡ, ಎ.ಎ.ಸೌಧಾಗರ, ಲಕ್ಷ್ಮವ್ವ ಬಳ್ಳಾರಿ, ವಿಜಯಲಕ್ಷ್ಮಿ ಬಳ್ಳಾರಿ ಸೇರಿದಂತೆ ಪೌರಕಾರ್ಮಿಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 