ಸೇವಾ ಭದ್ರತೆಗೆ ಒಪ್ಪಿಗೆ: ಪೌರ ನೌಕರರ ಮುಷ್ಕರ ಹಿಂದಕ್ಕೆ
Service security agreed: Civic employees' strike called off
ಸೇವಾ ಭದ್ರತೆಗೆ ಒಪ್ಪಿಗೆ: ಪೌರ ನೌಕರರ ಮುಷ್ಕರ ಹಿಂದಕ್ಕೆ
ಶಿಗ್ಗಾವಿ 31: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ಇಟ್ಟಿರುವ 19 ಬೇಡಿಕೆಗಳಾದಂತಹ ಕೆಜಿಐಡಿ ಮತ್ತು ಮುನ್ಸಿಪಲ್ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿ ಸೇವಾ ಭದ್ರತೆನೀಡಲಾಗುವುದು ಎಂದು ಪೌರಾಡಳಿತ ಸಚಿವರ ಆಪ್ತ ಕಾರ್ಯದರ್ಶಿ ಲಿಖಿತವಾಗಿ ನೀಡಿದ ಮೇಲೆ ಮುಷ್ಕರವನ್ನು ಹಿಂಪಡೆಯಲಾಯಿತು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಸಂಕೀರ್ಣದಲ್ಲಿರುವ ಅಂಬೇಡ್ಕರ ಪುತ್ತಳಿಗೆ ಹಾಗೂ ಕಿತ್ತೂರಾಣಿ ಚೆನ್ನಮ್ಮ ಪುತ್ತಳಿಗೆ ಮಾಲಾರೆ್ಣ ಮಾಡಿ ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ನಮ್ಮ ಧರಣಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಕ.ರಾ.ಪೌ.ನೌ.ಸಂಘದ ಅಧ್ಯಕ್ಷೆ ಶೈಲಜಾ ಹೆಚ್ ಪಾಟೀಲ ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ, ಕಂದಾಯ ಅಧಿಕಾರಿ ಅಮೀತ, ವ್ಯವಸ್ಥಾಪಕಿ ಮಂಗಳಗೌರ ಪಾಟೀಲ, ರಾಜೇಶ ಕಹಾರ, ಗಿರಿಜಮ್ಮ ಕಮಡೊಳ್ಳಿ, ಯಲ್ಲಪ್ಪ ಹಾದಿಮನಿ, ಮಂಜುನಾಥ ಕಟ್ಟಿಮನಿ, ಪ್ರಶಾಂತ ರಾಠೋಡ, ಎ.ಎ.ಸೌಧಾಗರ, ಲಕ್ಷ್ಮವ್ವ ಬಳ್ಳಾರಿ, ವಿಜಯಲಕ್ಷ್ಮಿ ಬಳ್ಳಾರಿ ಸೇರಿದಂತೆ ಪೌರಕಾರ್ಮಿಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 