ಬೆಲೆ ನಿಗದಿ ಮಾಡಿ ಕಾರ್ಖಾನೆ ಪ್ರಾರಂಭಿಸಿ: ನಾಗನಾಥಗೌಡ
Set a price and start a factory: Naganathgowda
ಇಂಡಿ 28: ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿ ವಿಜಯಪೂರ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು ಎಂದು ವಿಜಯಪೂರ ಜಿಲ್ಲಾ ಅಧಿಕಾರಿಗಳಾದ ಕೆ ಆನಂದ ಅವರಿಗೆ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಉಪಾಧ್ಯಕ್ಷರು ಹಾಗೂ ವಿಜಯಪೂರ ಜಿಲ್ಲಾ ಅಧ್ಯಕ್ಷರಾದ ನಾಗನಾಥಗೌಡ ಬಿರಾದಾರ ಅವರ ನೇತೃತ್ವದಲ್ಲಿ ನೂರಾರು ರೈತರ ಸಮ್ಮುಖದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು ಕಬ್ಬು ಬೆಳೆಗಾರರು ತುಂಬಾ ಸಂಕಷ್ಟದಲ್ಲಿ ಇದ್ದಾರೆ ಗೊಬ್ಬರ ಬೆಲೆ ಕೆಲಸಗಾರ ಸಂಬಳ ಹೆಚ್ಚಾಗಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಹಾಗೂ ಅತಿವೃಷ್ಟಿಯಿಂದ ಭೀಮಾ ತೀರದ ರೈತರು ಕಬ್ಬು ಬೆಳೆಗಳು ಹಾಗೂ ಇತರೆ ಬೆಳೆಗಳನ್ನು ಕಳೆದುಕೊಂಡು ರೈತರ ಬದುಕು ಮೂರಾಬಟ್ಟೆ ಆಗಿ ಹೋಗಿದೆ. ಮಾಹಾರಾಷ್ಟದ ಎಲ್ಲಾ ಕಾರ್ಖಾನೆಗಳು ಮತ್ತು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಕಾರ್ಖಾನೆಯವರು 3500 ರೂಂ ಬೆಂಬಲ ಬೆಲೆ ನೀಡಿದ್ದಾರೆ. ಅದರಂತೆ ವಿಜಯಪೂರ ಜಿಲ್ಲೆಯ ಎಲ್ಲಾ ಕಾರ್ಖಾನೆಗಳು ಪ್ರಾರಂಭಕ್ಕೂ ಮುನ್ನ ಬೆಲೆ ನಿಗದಿ ಮಾಡಿ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು. ಇಲ್ಲವಾದರೆ ಕಾರ್ಖಾನೆ ಮುಂದೆ ಪ್ರತಿಭಟನೆ ನುಡಿಸಲಾಗದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಬೈರಗೊಂಡ, ಶಂಕರ ಕುಂಬಾರ, ಮಲಕನಗೌಡ ಬಿರಾದಾರ, ಹಹೇಬಗೌಡ ಜೇವೂರ, ಚಿದಾನಂದ ಬಿರಾದಾರ, ಅನೀಲಗೌಡ ಪಾಟೀಲ, ಕುಲಂಕಾರ ಲೋಣಿ, ಕಲ್ಲನಗೌಡ ಬಿರಾದಾರ, ಮಲ್ಲಿಕಾರ್ಜುನ ಬೈರಗೊಂಡ, ಶ್ರೀಮಂತ ಉಮರಾಣಿ, ಚಂದ್ರಕಾಂತ ಬಿರಾದಾರ, ರವಿ ಬೈರಾಮಡಿ, ಬಸವರಾಜ ಡೊಣಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 