ಸೇವಾ ಸಪ್ತಾಹ : ರೋಗಿಗಳಿಗೆ ಬಿಜೆಪಿ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ
ನವದೆಹಲಿ, ಸೆ 14 ಬಿಜೆಪಿ ಕಾರ್ಯಕರ್ತರಿಂದ ಒಂದು ವಾರಗಳ ಕಾಲ ರೋಗಿಗಳಿಗೆ ಹಣ್ಣು - ಹಂಪಲು ವಿತರಿಸುವ ಸೇವಾ ಸಪ್ತಾಹ ದೇಶಾದ್ಯಂತ ಇಂದಿನಿಂದ ಆರಂಭವಾಗಿದೆ. ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದ್ದಾರೆ. ಇದೇ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಇಂದಿನಿಂದ 20 ನೇ ತಾರೀಖಿನವರೆಗೆ ಸೇವಾ ಸಪ್ತಾಹ ಆಚರಿಸಲು ನಿರ್ಧರಿಸಿದ್ದಾರೆ. ಅಲ್ಲದೇ ರಕ್ತದಾನ ಶಿಬಿರ, ಆರೋಗ್ಯ ಶಿಬಿರಗಳನ್ನೂ ಆಯೋಜಿಸಲಾಗಿದೆ, ಸ್ವಚ್ಛತಾ ಅಭಿಯಾನ, ಜಲ ಸಂರಕ್ಷಣೆ, ಏಕಬಳಕೆಯ ಪ್ಲಾಸ್ಟಿಕ್ ಹಾನಿ ಮೊದಲಾದ ವಿಷಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 