ಕೊರೊನಾ ಭೀತಿ: ಮದುವೆಯಲ್ಲಿ ಏಳು ಜನ ಭಾಗಿ
ಮಡಿಕೇರಿ, ಮಾ.26, ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶವೇ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಮದುವೆಯೊಂದರಲ್ಲಿ ವಧು-ವರ ಸೇರಿ ಕೇವಲ ಏಳು ಜನ ಮಾತ್ರ ಭಾಗಿಯಾಗಿರುವುದು ವರದಿ ಆಗಿದೆ.ಮಡಿಕೇರಿಯ ರಂಜಿತ್ ಮತ್ತು ಕಾಸರಗೋಡು ತಾಲೂಕಿನ ಗ್ರಾಮವೊಂದರ ಹುಡುಗಿ ಅನುಷಾಗೆ ಗುರುವಾರ ಮದುವೆ ಸುಳ್ಯದ ಪುರಭವನದಲ್ಲಿ ಮದುವೆ ನಿಶ್ಚಯವಾಗಿತ್ತು. ಅದಾಗಲೇ ಮದುವೆಗಾಗಿ ಐದುನೂರು ಜನರಿಗೆ ಆಮಂತ್ರಣ ಪತ್ರಿಕೆ ಹಂಚಲಾಗಿತ್ತಲ್ಲದೇ, ಪುರಭವನಕ್ಕೂ ಮುಂಗಡ ಹಣ ನೀಡಲಾಗಿತ್ತು.
ಆದರೆ ಕೊರೊನಾ ವೈರಸ್ನಿಂದಾಗಿ ದೇಶವನ್ನು ಲಾಕ್ಡೌನ್ ಮಾಡಿರುವುದರಿಂದ ಮದುವೆಯ ಸ್ಥಳವನ್ನು ಮಡಿಕೇರಿಗೆ ಬದಲಾಯಿಸಿ ನಗರದ ಹೊರವಲಯದಲ್ಲಿರುವ ರಾಜರಾಜೇಶ್ವರಿ ದೇವಾಲಯದಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಈ ಮದುವೆಯಲ್ಲಿ ವಧು-ವರರ ತಂದೆ,ತಾಯಿ ಮತ್ತು ಅರ್ಚಕರು ಮಾತ್ರವೇ ಭಾಗಿಯಾಗಿದ್ದರು.ಈ ಕುರಿತು ವರ ರಂಜಿತ್ ಸುದ್ದಿಗಾರರೊಂದಿಗೆ ಮಾತನಾಡಿ, ಅದ್ಧೂರಿಯಾಗಿ ಮದುವೆ ಆಗಬೇಕು ಎಂದು ಸುಮಾರು 500 ಮದುವೆ ಆಮಂತ್ರಣ ಪತ್ರಿಕೆಯನ್ನು ಹಂಚಲಾಗಿತ್ತು. ಆದರೆ, ಕೊರೊನಾ ವೈರಸ್ನಿಂದ ಇಡೀ ಜಗತ್ತು ಆಂತಕಕ್ಕೆ ಒಳಗಾಗಿದ್ದ ರಿಂದ ಸರಳವಾಗಿ ಮದುವೆ ಆಗಿದ್ದೇವೆ ಎಂದು ತಿಳಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 