ಕೊರೊನಾ ಭೀತಿ: ಮದುವೆಯಲ್ಲಿ ಏಳು ಜನ ಭಾಗಿ
ಮಡಿಕೇರಿ, ಮಾ.26, ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶವೇ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಮದುವೆಯೊಂದರಲ್ಲಿ ವಧು-ವರ ಸೇರಿ ಕೇವಲ ಏಳು ಜನ ಮಾತ್ರ ಭಾಗಿಯಾಗಿರುವುದು ವರದಿ ಆಗಿದೆ.ಮಡಿಕೇರಿಯ ರಂಜಿತ್ ಮತ್ತು ಕಾಸರಗೋಡು ತಾಲೂಕಿನ ಗ್ರಾಮವೊಂದರ ಹುಡುಗಿ ಅನುಷಾಗೆ ಗುರುವಾರ ಮದುವೆ ಸುಳ್ಯದ ಪುರಭವನದಲ್ಲಿ ಮದುವೆ ನಿಶ್ಚಯವಾಗಿತ್ತು. ಅದಾಗಲೇ ಮದುವೆಗಾಗಿ ಐದುನೂರು ಜನರಿಗೆ ಆಮಂತ್ರಣ ಪತ್ರಿಕೆ ಹಂಚಲಾಗಿತ್ತಲ್ಲದೇ, ಪುರಭವನಕ್ಕೂ ಮುಂಗಡ ಹಣ ನೀಡಲಾಗಿತ್ತು.
ಆದರೆ ಕೊರೊನಾ ವೈರಸ್ನಿಂದಾಗಿ ದೇಶವನ್ನು ಲಾಕ್ಡೌನ್ ಮಾಡಿರುವುದರಿಂದ ಮದುವೆಯ ಸ್ಥಳವನ್ನು ಮಡಿಕೇರಿಗೆ ಬದಲಾಯಿಸಿ ನಗರದ ಹೊರವಲಯದಲ್ಲಿರುವ ರಾಜರಾಜೇಶ್ವರಿ ದೇವಾಲಯದಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಈ ಮದುವೆಯಲ್ಲಿ ವಧು-ವರರ ತಂದೆ,ತಾಯಿ ಮತ್ತು ಅರ್ಚಕರು ಮಾತ್ರವೇ ಭಾಗಿಯಾಗಿದ್ದರು.ಈ ಕುರಿತು ವರ ರಂಜಿತ್ ಸುದ್ದಿಗಾರರೊಂದಿಗೆ ಮಾತನಾಡಿ, ಅದ್ಧೂರಿಯಾಗಿ ಮದುವೆ ಆಗಬೇಕು ಎಂದು ಸುಮಾರು 500 ಮದುವೆ ಆಮಂತ್ರಣ ಪತ್ರಿಕೆಯನ್ನು ಹಂಚಲಾಗಿತ್ತು. ಆದರೆ, ಕೊರೊನಾ ವೈರಸ್ನಿಂದ ಇಡೀ ಜಗತ್ತು ಆಂತಕಕ್ಕೆ ಒಳಗಾಗಿದ್ದ ರಿಂದ ಸರಳವಾಗಿ ಮದುವೆ ಆಗಿದ್ದೇವೆ ಎಂದು ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 