ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜು ಕಟ್ಟಿದ್ದ ಏಳು ಜನರ ಬಂಧನ
ಉಡುಪಿ, ಏಪ್ರಿಲ್ 7,ಜಿಲ್ಲೆಯ ಕಾವಡಿ ಮಹಲಿಂಗೇಶ್ವರ ದೇವಸ್ಥಾನ ಮೈದಾನದಲ್ಲಿ ನಡೆದಿದ್ದ ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜಾಡುತ್ತಿದ್ದ 7 ಜನರನ್ನು ಕೋಟಾ ಪೊಲೀಸರು ಬಂಧಿಸಿ ಅವರಿಂದ 1.72 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮಧುಕರ್ (33), ಜಯರಾಮ್ ಶೆಟ್ಟಿ (49), ಪ್ರಶಾಂತ್ (42), ರಾಘವೇಂದ್ರ (39), ಲೋಕೇಶ್ ಬಾರ್ಕೂರ್ (35), ಸುಧಾಕರ್ (39) ಮತ್ತು ಸುಕೇತ್ (29) ಎಂದು ಗುರುತಿಸಲಾಗಿದೆ. ನಿರ್ದಿಷ್ಟ ಮಾಹಿತಿಯಂತೆ ಪೊಲೀಸರು ಆ ಪ್ರದೇಶದ ಮೇಲೆ ದಾಳಿ ನಡೆಸಿ ಸೋಮವಾರ ಸಂಜೆ ಈ ಏಳು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 6,880 ರೂ. ನಗದು, ಎರಡು ಹುಂಜಗಳು ಹಾಗೂ ಎಂಟು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳದಿಂದ ಇಬ್ಬರು ವ್ಯಕ್ತಿಗಳು ತಮ್ಮ ವಾಹನಗಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯಡಿ ಮತ್ತು ಕೋಳಿಅಂಕ ವಿರುದ್ಧ ಸುಪ್ರೀಂಕೋರ್ಟ್ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಕೋಳಿಅಂಕ ಜೂಜಾಟವಾಗಿದ್ದು, ಇದರಲ್ಲಿ ಕೋಳಿಗಳ ಕಾಲುಗಳಿಗೆ ಹರಿತ ಚಾಕುಗಳನ್ನು ಕಟ್ಟಲಾಗುತ್ತದೆ. ಕೋಳಿಗಳು ಪರಸ್ಪರ ಹೊಡಾಡಿಕೊಳ್ಳುವಾಗ ಚಾಕುವಿನಿಂದ ತೀವ್ರವಾಗಿ ಗಾಯಗೊಂಡ ಕೋಳಿ ಸೋಲನ್ನಪ್ಪುತ್ತದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 