ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜು ಕಟ್ಟಿದ್ದ ಏಳು ಜನರ ಬಂಧನ
ಉಡುಪಿ, ಏಪ್ರಿಲ್ 7,ಜಿಲ್ಲೆಯ ಕಾವಡಿ ಮಹಲಿಂಗೇಶ್ವರ ದೇವಸ್ಥಾನ ಮೈದಾನದಲ್ಲಿ ನಡೆದಿದ್ದ ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜಾಡುತ್ತಿದ್ದ 7 ಜನರನ್ನು ಕೋಟಾ ಪೊಲೀಸರು ಬಂಧಿಸಿ ಅವರಿಂದ 1.72 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮಧುಕರ್ (33), ಜಯರಾಮ್ ಶೆಟ್ಟಿ (49), ಪ್ರಶಾಂತ್ (42), ರಾಘವೇಂದ್ರ (39), ಲೋಕೇಶ್ ಬಾರ್ಕೂರ್ (35), ಸುಧಾಕರ್ (39) ಮತ್ತು ಸುಕೇತ್ (29) ಎಂದು ಗುರುತಿಸಲಾಗಿದೆ. ನಿರ್ದಿಷ್ಟ ಮಾಹಿತಿಯಂತೆ ಪೊಲೀಸರು ಆ ಪ್ರದೇಶದ ಮೇಲೆ ದಾಳಿ ನಡೆಸಿ ಸೋಮವಾರ ಸಂಜೆ ಈ ಏಳು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 6,880 ರೂ. ನಗದು, ಎರಡು ಹುಂಜಗಳು ಹಾಗೂ ಎಂಟು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳದಿಂದ ಇಬ್ಬರು ವ್ಯಕ್ತಿಗಳು ತಮ್ಮ ವಾಹನಗಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯಡಿ ಮತ್ತು ಕೋಳಿಅಂಕ ವಿರುದ್ಧ ಸುಪ್ರೀಂಕೋರ್ಟ್ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಕೋಳಿಅಂಕ ಜೂಜಾಟವಾಗಿದ್ದು, ಇದರಲ್ಲಿ ಕೋಳಿಗಳ ಕಾಲುಗಳಿಗೆ ಹರಿತ ಚಾಕುಗಳನ್ನು ಕಟ್ಟಲಾಗುತ್ತದೆ. ಕೋಳಿಗಳು ಪರಸ್ಪರ ಹೊಡಾಡಿಕೊಳ್ಳುವಾಗ ಚಾಕುವಿನಿಂದ ತೀವ್ರವಾಗಿ ಗಾಯಗೊಂಡ ಕೋಳಿ ಸೋಲನ್ನಪ್ಪುತ್ತದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 