ತೀವ್ರ ಪ್ರವಾಹ ಪರಿಸ್ಥಿತಿ: ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆ ಯಡಿಯೂರಪ್ಪ ಮಾತುಕತೆ
ಬೆಳಗಾವಿ, ಆ 8 ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ
ಗುರುವಾರ ಮಧ್ಯಾಹ್ನ ಯಡಿಯೂರಪ್ಪಗೆ ಮೊಬೈಲ್ ಕರೆ ಮಾಡಿ ಮಾತನಾಡಿದ ದೇವೇಂದ್ರ ಪಡ್ನವೀಸ್, ಕೋಯ್ನಾ ಜಲಾಶಯದಿಂದ 5 ಲಕ್ಷಕ್ಕೂ ಕ್ಯೂಸೆಕ್ ಗೂ ಹೆಚ್ಚು ನೀರು ಹರಿದು ಬರುತ್ತಿದೆ.
ಹೀಗಾಗಿ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಕೋಯ್ನಾ ಜಲಾಶಯದಿಂದ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ ಗಡಿಭಾಗದ ಗ್ರಾಮಗಳಿಗೆ ಹಾಗೂ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡುವಂತೆಯೂ, ಅಗತ್ಯವಿದ್ದಲ್ಲಿ ಜನರನ್ನು ಸ್ಥಳಾಂತರಿಸುವಂತೆ ಅವರು ಮನವಿ ಮಾಡಿದರು.
ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ ಬಳಿಕ ಯಡಿಯೂರಪ್ಪ, ಈ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 