ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಲೋಕದರ್ಶನ ವರದಿ
ಮುಂಡಗೋಡ 16: ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಮದುವೆ ಯಾಗುವುದಾಗಿ ಪ್ರಮಾಣಮಾಡಿ ತಲೆ ಮರೆಸಿಕೊಂಡಿದ್ದ ನಿಜವಾದ ಆರೋಪಿ ಮಂಜುನಾಥ ತಳವಾರ ಗುರುವಾರ ಮುಂಡಗೋಡ ಪೊಲೀಸರು ಬಂದಿಸಿದ್ದಾರೆ
ಅಪ್ರಾಪ್ತೆಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಬಗ್ಗೆ ನವಂಬರ 2ರಂದು ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನವಂಬರ 2ರಂದು ಪೊಲೀಸ್ ಠಾಣೆಯಲ್ಲಿ ಮಳಗಿ ಗ್ರಾಮದ ಸಂತೋಷ ಹುಲ್ಲೂರ(23) ಎಂಬ ಯುವಕನ ವಿರುದ್ಧ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದರು.
ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡು ಯಲ್ಲಾಪುರ ಸಿ.ಪಿ.ಐ. ಡಾ.ಮಂಜುನಾಥ ನಾಯ್ಕ ಮತ್ತು ಇಲ್ಲಿನ ಪ್ರಭಾರ ಪಿಎಸ್ಆಯ್ ಚಂದ್ರಶೇಖರ ಹರಿಹರ ಸಂತೋಷ ಹುಲ್ಲೂರನ ವಿಚಾರಣೆಗೊಳಪಡಿಸಿದಾಗ ಇವನು ಈ ಕೃತ್ಯ ಮಾಡಿರಲಿಕ್ಕಿಲ್ಲಾ ಎಂಬ ಅನುಮಾನ ಮೂಡಿ ಬಂದಿದೆ.
ಸಂಶಯದ ಸುಳಿಯನ್ನು ಬೆನ್ನುಹತ್ತಿದ ಪೊಲೀಸರು ಬೇರೊಬ್ಬನ ಕೈವಾಡವಿರುವ ಬಗ್ಗೆ ಕೆಲ ಗ್ರಾಮಸ್ಥ ರಿಂದ ತಿಳಿದು ಬಂದು ಮಳಗಿ ಗ್ರಾಮದ ವಿವಾಹಿತ ಮಂಜುನಾಥ ತಳವಾರ(22)ನ ಈ ಕೃತ್ಯವನ್ನು ಮಾಡಿದ್ದಾನೆಂದು ಖಾತ್ರಿಪಡಿಸಿಕೊಂಡು ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಮತ್ತು ಸಂತ್ರಸ್ತೆಯೂ ಮಂಜುನಾಥನ ಹೆಸರನ್ನು ಒಪ್ಪಿಕೊಂಡಾಗ ಪ್ರಕರಣಕ್ಕೆ ಅಂತಿಮ ತೆರೆ ಎಳೆದಂತಾಯಿತು.
ಆರೋಪಿ ಮಂಜುನಾಥ ತಳವಾರನನ್ನು ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 