ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಲೋಕದರ್ಶನ ವರದಿ
ಮುಂಡಗೋಡ 16: ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಮದುವೆ ಯಾಗುವುದಾಗಿ ಪ್ರಮಾಣಮಾಡಿ ತಲೆ ಮರೆಸಿಕೊಂಡಿದ್ದ ನಿಜವಾದ ಆರೋಪಿ ಮಂಜುನಾಥ ತಳವಾರ ಗುರುವಾರ ಮುಂಡಗೋಡ ಪೊಲೀಸರು ಬಂದಿಸಿದ್ದಾರೆ
ಅಪ್ರಾಪ್ತೆಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಬಗ್ಗೆ ನವಂಬರ 2ರಂದು ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನವಂಬರ 2ರಂದು ಪೊಲೀಸ್ ಠಾಣೆಯಲ್ಲಿ ಮಳಗಿ ಗ್ರಾಮದ ಸಂತೋಷ ಹುಲ್ಲೂರ(23) ಎಂಬ ಯುವಕನ ವಿರುದ್ಧ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದರು.
ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡು ಯಲ್ಲಾಪುರ ಸಿ.ಪಿ.ಐ. ಡಾ.ಮಂಜುನಾಥ ನಾಯ್ಕ ಮತ್ತು ಇಲ್ಲಿನ ಪ್ರಭಾರ ಪಿಎಸ್ಆಯ್ ಚಂದ್ರಶೇಖರ ಹರಿಹರ ಸಂತೋಷ ಹುಲ್ಲೂರನ ವಿಚಾರಣೆಗೊಳಪಡಿಸಿದಾಗ ಇವನು ಈ ಕೃತ್ಯ ಮಾಡಿರಲಿಕ್ಕಿಲ್ಲಾ ಎಂಬ ಅನುಮಾನ ಮೂಡಿ ಬಂದಿದೆ.
ಸಂಶಯದ ಸುಳಿಯನ್ನು ಬೆನ್ನುಹತ್ತಿದ ಪೊಲೀಸರು ಬೇರೊಬ್ಬನ ಕೈವಾಡವಿರುವ ಬಗ್ಗೆ ಕೆಲ ಗ್ರಾಮಸ್ಥ ರಿಂದ ತಿಳಿದು ಬಂದು ಮಳಗಿ ಗ್ರಾಮದ ವಿವಾಹಿತ ಮಂಜುನಾಥ ತಳವಾರ(22)ನ ಈ ಕೃತ್ಯವನ್ನು ಮಾಡಿದ್ದಾನೆಂದು ಖಾತ್ರಿಪಡಿಸಿಕೊಂಡು ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಮತ್ತು ಸಂತ್ರಸ್ತೆಯೂ ಮಂಜುನಾಥನ ಹೆಸರನ್ನು ಒಪ್ಪಿಕೊಂಡಾಗ ಪ್ರಕರಣಕ್ಕೆ ಅಂತಿಮ ತೆರೆ ಎಳೆದಂತಾಯಿತು.
ಆರೋಪಿ ಮಂಜುನಾಥ ತಳವಾರನನ್ನು ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 