ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶೈಲಜಾ ಮಾನ್ವಿ
Shailaja Manvi inaugurated the Poshan Month celebration program
ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶೈಲಜಾ ಮಾನ್ವಿ
ಗದಗ 24: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಚೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಗದಗ ಇವರ ಸಂಯುಕ್ತಾಶ್ರಯದಲ್ಲಿ ದಿ. 23ರಂದು ಗದಗ ತಾಲೂಕಿನ ಪೇಟೆ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರೊಂದಿಗೆ ಶೈಲಜಾ ವಿನಾಯಕ ಮಾನ್ವಿ ಓಣಿಯ ಹಿರಿಯರು ಉದ್ಘಾಟಿಸಿದರು. ಮ ಮ ಅ ಇ ನಿರೂಪಣಾಧಿಕಾರಿಗಳು ರಾಧಾ ಜಿ ಮಣ್ಣೂರ ಇವರು ಮಾತನಾಡಿ ಪೋಷಣ ಮಾಸಾಚರಣೆ 2025ರ ಮುಖ್ಯ ವಿಷಯಗಳಾದ ಬೊಜ್ಜುತನ ನಿವಾರಣೆ, ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವುದು, ಪೋಷಣ ಭಿ ಪಢಾಯಿ ಭಿ, ಶಿಶು ್ಘ ಚಿಕ್ಕ ಮಕ್ಕಳ ಆಹಾರ ಅಭ್ಯಾಸಗಳು, ಪುರುಷರ ಸಹಬಾಗಿತ್ವದ ಕುರಿತಾದ ಮಾಹಿತಿಗಳನ್ನು ನೀಡಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ. ಇವರು ಮಾತನಾಡಿ ಪೌಷ್ಠಿಕ ಆಹಾರವನ್ನು ಮಕ್ಕಳು, ಗರ್ಭಿಣಿ, ಬಾಣಂತಿಯರು ಸರಿಯಾಗಿ ಸೇವಿಸಬೇಕು ಹಾಗೂ ಅದರ ಮಹತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ನಂತರ ಲಿಂಗತ್ವ ಅಲ್ಪ ಸಂಖ್ಯಾತರ ಹಾಗೂ ದೇವದಾಸಿಯರ ಮರುಸಮೀಕ್ಷೆ ಕುರಿತಾದ ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಎಚ್.ಎಸ್ ಜೋಗೇರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗದಗ, ಕು. ಸಂಗೀತಾ ಹೂಗಾರ ಪೋಷಣ ಜಿಲ್ಲಾ ಸಂಯೋಜಕರು, ಕು. ಪವನ ಕಾಟೀಗರ ಪೋಷಣ ಜಿಲ್ಲಾ ಕಾರ್ಯಕ್ರಮ ಸಹಾಯಕರು, ಆರೋಗ್ಯ ್ಘ ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಗದಗ 2 ವಲಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಮುದ್ದು ಮಕ್ಕಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 