ಶಂಕರ ಪಟೇದ ಆತ್ಮಹತ್ಯೆಗೆ ಶರಣು
Shankar Patted committed suicide
ಸಂಕೇಶ್ವರ 08: ಪಟ್ಟಣದ ಬೀರೇಶ್ವರ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಎಲ್ ಐಸಿ ಎಜೆಂಟರಾಗಿದ್ದ ಶಂಕರ ಲಕ್ಷ್ಮಣ ಪಟೇದ (45) ಅವರು ಆತ್ಮಹತ್ಯೆ ಶರಣಾಗಿದ್ದಾರೆ. ಶಂಕರ ಪಟೇದ ಅವರು ಕಳೆದ ಹಲವಾರು ವರ್ಷಗಳಿಂದ ಎಲ್ ಐಸಿ ಏಜೆಂಟ್ ಆಗಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿ ಕೆಲಸ ಮಾಡುತ್ತಿದ್ದರು.
ಆದರೆ ಮಂಗಳವಾರ ಬೆಳಗಿನ ಜಾವ ತಮ್ಮ ನಿವಾಸದ ಮೇಲ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಹಿಂದೆ ತಂದೆ, ತಾಯಿ, ಪತ್ನಿ, ಮೂವರು ಮಕ್ಕಳು ಹೀಗೆ ಕುಟುಂಬದ ಹೊಂದಿದ್ದರು. ಈ ಕುರಿತು ತಮ್ಮ ಪತಿ ಸಾಲ ಮಾಡಿ ತೀರಿಸಲು ಆಗದೆ ಬೇಸರಗೊಂಡು ಜಿಗುಪ್ಸೆ ಯಿಂದ ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಶಂಕರನ ಪತ್ನಿ ಸಂಕೇಶ್ವರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 