ಶಂಕರ ಪಟೇದ ಆತ್ಮಹತ್ಯೆಗೆ ಶರಣು
Shankar Patted committed suicide
ಸಂಕೇಶ್ವರ 08: ಪಟ್ಟಣದ ಬೀರೇಶ್ವರ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಎಲ್ ಐಸಿ ಎಜೆಂಟರಾಗಿದ್ದ ಶಂಕರ ಲಕ್ಷ್ಮಣ ಪಟೇದ (45) ಅವರು ಆತ್ಮಹತ್ಯೆ ಶರಣಾಗಿದ್ದಾರೆ. ಶಂಕರ ಪಟೇದ ಅವರು ಕಳೆದ ಹಲವಾರು ವರ್ಷಗಳಿಂದ ಎಲ್ ಐಸಿ ಏಜೆಂಟ್ ಆಗಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿ ಕೆಲಸ ಮಾಡುತ್ತಿದ್ದರು.
ಆದರೆ ಮಂಗಳವಾರ ಬೆಳಗಿನ ಜಾವ ತಮ್ಮ ನಿವಾಸದ ಮೇಲ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಹಿಂದೆ ತಂದೆ, ತಾಯಿ, ಪತ್ನಿ, ಮೂವರು ಮಕ್ಕಳು ಹೀಗೆ ಕುಟುಂಬದ ಹೊಂದಿದ್ದರು. ಈ ಕುರಿತು ತಮ್ಮ ಪತಿ ಸಾಲ ಮಾಡಿ ತೀರಿಸಲು ಆಗದೆ ಬೇಸರಗೊಂಡು ಜಿಗುಪ್ಸೆ ಯಿಂದ ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಶಂಕರನ ಪತ್ನಿ ಸಂಕೇಶ್ವರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 