ಸಾವಿತ್ರಿ ಬಾಯಿಪುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಶಾಂತಾ ಘಡ್ಡದ ಆಯ್ಕೆ
Shanta Gadda selected for Savitri Baipule Best Teacher Award
ಕಂಪ್ಲಿ 02: ದಕ್ಷಿಣ ಭಾರತದ ಸಾವಿತ್ರಿ ಬಾಯಿ ಪುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಕಂಪ್ಲಿಯ ಶಾಂತಾ ಘಡ್ಡದ ಭಾಜನರಾಗಿದ್ದಾರೆ. ಆಂದ್ರ ಪ್ರದೇಶದ ಗುರುಚೈತನ್ಯ ಉಪಾಧ್ಯಯ ಸಂಘವು ಸಾವಿತ್ರ ಬಾಯಿಪುಲೆ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷ ನೀಡುವ ಸಾವಿತ್ರಿ ಬಾಯಿಪುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಪಂ ವ್ಯಾಪ್ತಿಯ ಅರಳಳ್ಳಿತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶಾಂತಾ ಘಡ್ಡದ ಇವರಿಗೆ ಒಲಿದು ಬಂದಿದೆ. ಸಂಘವು ದೇಶದ 12 ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಒಳ್ಳೆಯ ಸೇವೆ ಸಲ್ಲಿಸಿದ ಶಿಕ್ಷಕರನ್ನು ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡುತ್ತಿದೆ. 12 ರಾಜ್ಯಗಳ ಪೈಕಿ ಕರ್ನಾಟಕದಿಂದ ಕಠಿಣ ಪರಿಶ್ರಮ, ಶಿಕ್ಷಣಕ್ಕೆ ನೀಡಿದ ಕೊಡುಗೆ ಹಾಗೂ ಇವರ ಸೇವೆಯನ್ನು ಗುರುತಿಸಿ, ಕಂಪ್ಲಿಯ ಸಹ ಶಿಕ್ಷಕಿ ಶಾಂತಾ ಇವರನ್ನು ಆಯ್ಕೆ ಮಾಡಿರುವುದು ಹರ್ಷದಾಯಕವಾಗಿದೆ. ಜ.03ರಂದು ವಿಜಯವಾಡದಲ್ಲಿ ತುಮ್ಮಲಪಲ್ಲಿ ಕಲಾಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಕರ್ನಾಟಕ ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿರುವುದು ಅವಿಸ್ಮರಣೀಯವಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 