ಶಾಂತಾ ಗಡ್ಡದಗೆ ವಿಜಯವಾಡದಲ್ಲಿ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರಧಾನ
Shanta Gadda wins best teacher award in Vijayawada
ಕಂಪ್ಲಿ 07: ತಾಲ್ಲೂಕಿನ ಸಣಾಪುರ ಗ್ರಾಮಪಂಚಾಯತಿ ವ್ಯಾಪ್ತಿಯ ಅರಳಿಹಳ್ಳಿ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಾಂತಾ ಗಡ್ಡದ ಅವರ ಶೈಕ್ಷಣಿಕ ಅಭಿವೃದ್ಧಿ ಹಾಗೂ ಬೋಧನೆಯಲ್ಲಿ ಒಳಗೊಳ್ಳುವಿಕೆಯ ಕ್ರಿಯಾಶೀಲತೆಗಾಗಿ ದಕ್ಷಿಣ ಭಾರತದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಆಂದ್ರ್ರದೇಶದ ವಿಜಯವಾಡದ ಶ್ರೀಗುರು ಚೈತನ್ಯ ಉಪಧ್ಯಾಯ ಸಂಘವು ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಪುಲೇ ಜನ್ಮದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಪಲೇಲ ರಾಮಾಂಜಿನೇಲು, ಕಾರ್ಯದರ್ಶಿ ಮೊಹ್ಮದ್ ಹುಸೇನ್, ಮುಖಂಡರಾದ ಪ್ರೋಶೈಲಜಾ, ಬಿ.ರಾಮಚಂದ್ರ ಯಾದವ್, ಚಿಂತಲ ಅನಂತಲಕ್ಷ್ಮೀ, ಶ್ರೀನಿವಾಸರಾವ್, ಕೆ.ರಮೇಶ್ ಯಾದವ್, ವೀರಶಿವಬಾಬು, ಮುರಳಿಮೋಹನ್ ಸೇರಿದಮತೆ ಇತರರು ಇದ್ದರು.
ದಕ್ಷಿಣ ಭಾರತದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ಶಾಂತಾ ಗಡ್ಡದ ಅವರನ್ನು ಶಾಲೆಯ ಶಿಕ್ಷಕರಾದ ಗುರುಸಿದ್ದಪ್ಪ, ರಾಜ್ಯ ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ನಾನಗನಗೌಡ ಎಂ.ಎ. ಸೇರಿದಂತೆ ತಾಲ್ಲೂಕಿನ ಶಿಕ್ಷಕರು ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 