ಶಾರದ ಚಿಟ್ ಫಂಡ್ ಹಗರಣ: ರಾಜೀವ್ ಕುಮಾರ್ ಜಾಮೀನು ಅರ್ಜಿ ವಜಾ
ಬರಾಕ್ಪೋರ್ ಸೆ 17 ಬಹುಕೋಟಿ ಶಾರದ ಚಿಟ್ ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ವಿಭಾಗದ ಎಡಿಜಿ ಅಧಿಕಾರಿ ರಾಜೀವ್ ಕುಮಾರ್ ಅವರ ಜಾಮೀನು ಮನವಿಯನ್ನು ಬರಾಸತ್ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿ, ಇದು ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಹೊಂದಿಲ್ಲ ಎಂದೂ ಅಭಿಪ್ರಾಯಪಟ್ಟಿದೆ.
ಸಂಸದರು ಮತ್ತು ಶಾಸಕರಿಗೆ ಮಾತ್ರ ಸೀಮಿವಾದ ವಿಚಾರಣಾ ನ್ಯಾಯಾಲಯವಾಗಿದೆ ಆದ್ದರಿಂದ ಕುಮಾರ್ ಅವರು ಜಿಲ್ಲಾ ಇಲ್ಲವೆ ಸೆಷನ್ಸ್ ನ್ಯಾಯಾಲಯಕ್ಕೆ ಹೋಗಬಹುದು ಎಂದೂ ಸಲಹೆ ಮಾಡಿದೆ. ಆದರ ಪ್ರಕಾರ ಕುಮಾರ್ ಅವರ ವಕೀಲರು ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ ಎಂದೂ ವರದಿಯಾಗಿದ್ದು,ಬಂಧನ ಬೀತಿ ಎದುರಾಗಿದೆ.ಆದರೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ತನ್ನ ಮುಂದೆ ವಿಚಾರಣೆಗೆ ಹಾಜರಾಗಬೇಕಿರುವ ಹಿರಿಯ ಐಪಿಎಸ್ ರಾಜೀವ್ ಕುಮಾರ್ ಎಲ್ಲಿದ್ದಾರೆ ಎಲ್ಲಿ ಅಡಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಹಾಯ ಮಾಡುವಂತೆ ಸಿಬಿಐ ಪಶ್ಚಿಮ ಬಂಗಾಳ ಸರ್ಕಾರವನ್ನು ಕೋರಿದೆ.
ಬಹುಕೋಟಿ ಶಾರದ ಚಿಟ್ ಫಂಡ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ, ಕೊಲ್ಕತ್ತಾ ಹೈಕೋರ್ಟ್ ಆದೇಶದಂತೆ ವಿಚಾರಣೆ ನೆಡಸಲು ತನ್ನ ಮುಂದೆ ಹಾಜರಾಗುವಂತೆ ರಾಜೀವ್ ಕುಮಾರ್ ಅವರಿಗೆ ತಾಕೀತು ಮಾಡಿದೆ. ಸಮನ್ಸ್ ನೋಟೀಸ್ ಗಳನ್ನು ಧಿಕ್ಕರಿಸಿರುವ ಮಾಜಿ ಪೊಲೀಸ್ ಅಧಿಕಾರಿ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸುವಂತೆ ಬರಾಸತ್ ನ್ಯಾಯಾಲಯವನ್ನು ಕೋರಿದೆ.
ಸಿಬಿಐ ವಿಚಾರಣೆಯಿಂದ ತಕ್ಷಣದ ಪರಿಹಾರ ಪಡೆಯಲು ಪೊಲೀಸ್ ಅಧಿಕಾರಿ ಮುಂದಾಗುವ ಸಾಧ್ಯತೆಯ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಗೆ ಕೇವಿಯಟ್ ಹಾಕಲು ಸಿಬಿಐ ಚಿಂತನೆ ಮಾಡುತ್ತಿದೆ ಎಂದೂ ಹೇಳಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 