ಮೋದಿ ದೇಶದ ಆರ್ಥಿಕತೆ, ಅನ್ನದಾತರ ಬಗ್ಗೆ ಮಾತನಾಡಲಿ: ಶರದ್ ಪವಾರ್
ಮುಂಬೈ ಅ, 12: ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಬಿರುಸು ಗೊಂಡಿರುವಾಗಲೇ ಯುಕೆಯಲ್ಲಿನ ಕಾಂಗ್ರೆಸ್ ಘಟಕವು ರಹಸ್ಯವಾಗಿ ಪ್ರತಿಪಕ್ಷ ಲೇಬರ್ ಪಾರ್ಟಿ ನಾಯಕ ಜೆರೆಮಿ ಕಾರ್ಬ್ನ್ರನ್ನು ಭೇಟಿಯಾಗಿ ಕಾಶ್ಮೀರ ವಿಚಾರ ಕುರಿತು ಮಾತುಕತೆ ನಡೆಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಇದಕ್ಕಾಗಿ ಪಕ್ಷದ ಮುಖಂಡ ರಾಹುಲ್ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಗ್ರಹಪಡಿಸಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಮೂರನೆಯವರ ಹಸ್ತಕ್ಷೇಪ ಸಲ್ಲ ಎಂಬ ಭಾರತೀಯ ನಿಯಮಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ನಡೆದುಕೊಂಡಿದೆ. ಈ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿ, ಕ್ಷಮೆ ಯಾಚಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ . ಕಾಂಗ್ರೆಸ್ ಹಾಗೂ ಎನ್ಸಿಪಿ ಕೇವಲ ತಮ್ಮ ಕುಟುಂಬದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿವೆ. ಆದರೆ, ಬಿಜೆಪಿ ಮಾತ್ರ ದೇಶಕ್ಕಾಗಿ ಕೆಲಸ ಮಾಡುತ್ತಿದೆ ಎಂದೂ ಶಾ ಹೇಳಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಯಿಸಿರುವ ಎನ್ಸಿಪಿ ನಾಯಕ ಶರದ್ ಪವಾರ್, ಬೇಡದ ವಿಚಾರಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಮೋದಿ ಮತ್ತು ಅಮಿತ್ ಶಾ ದೇಶದ ಆಥರ್ಿಕತೆ, ಅನ್ನದಾತರ ಬಗ್ಗೆ ಮಾತನಾಡಿ ಸತ್ಯ ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 