ಶರಣ ಸಂಸ್ಕೃತಿ ಉತ್ಸವ-2025
Sharan Culture Festival-2025
ಚಿತ್ರದುರ್ಗ: 20 ಸೆಪ್ಟಂಬರ್ 2025, ಅರಿವಿನ ಕುರುಹಾಗಿ ಬಸವಣ್ಣನವರು ಕರದಲ್ಲಿ ಇಷ್ಟಲಿಂಗವಿರಿಸಿ ಆರಾಧಿಸುವ ಸಾಧನವನ್ನು ನೀಡಿದರು. ಅದು ವಿಶ್ವಾತ್ಮನ ಸ್ವರೂಪವು ಹೌದು ಎಂದು ಶಿರಸಂಗಿಯ.ಬಸವಮಹಾಂತ ಸ್ವಾಮೀಜಿಯವರು ಇಷ್ಟಲಿಂಗದ ಮಹತ್ವವನ್ನು ತಿಳಿಸಿದರು.
ಶ್ರೀಗಳವರು ಶರಣ ಸಂಸ್ಕೃತಿ ಉತ್ಸವ-2025 ಅಂಗವಾಗಿ ಶ್ರೀ.ಜಗದ್ಗುರು ಮುರುಘಾರಾಜೇಂದ್ರ ಬೃಹನ್ಮಠದಲ್ಲಿ ಮುರುಗಿಯ ಶಾಂತವೀರಸ್ವಾಮಿಗಳ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿ ಆಯೋಜಿಸಲಾಗಿದ್ದ ಸಹಜ ಶಿವಯೋಗ ಪ್ರಾತ್ಯಕ್ಷಿಕೆ ನಡೆಸಿಕೊಡುತ್ತ ಇಷ್ಟಲಿಂಗದ ಮೂಲಕ ಮಹತ್ ಸಾಧನೆ ಮಾಡಿದ ಮಹನೀಯರ ದೊಡ್ಡ ಪರಂಪರೆಯೇ ಚರಿತ್ರೆಯಲ್ಲಿ ಆಗಿ ಹೋಗಿದೆ. ಅಥಣಿ ಶಿವಯೋಗಿಗಳು, ಹರ್ಡೇಕರ್ ಮಂಜಪ್ಪನವರು. ಬಿ.ಡಿ.ಜತ್ತಿಯವರು ಸೇರಿದಂತೆ ಸಾವಿರಾರು ಮಹನೀಯರನ್ನು ಉಲ್ಲೇಖಿಸಬಹುದು. ಸರಳ ಸಹಜ ಬದುಕಿನ ನಿರ್ವಹಣೆಗೆ ಸಹಜ ಶಿವಯೋಗ ಸಹಾಯಕಾರಿ ಆಗಬಲ್ಲದು ಎಂದು ನುಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿಗಳು ವಹಿಸಿದ್ದರು. ಗುರುಮಠಕಲ್ನ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಸಿದ್ಧಬಸವ ಕಬೀರ ಸ್ವಾಮಿಗಳು, ಬಸವ ಮಹಾಂತ ಸ್ವಾಮಿಗಳು, ಕೊಲ್ಲಾಪುರದ ಶಿವಾನಂದ ಸ್ವಾಮಿಗಳು, ಬಸವಲಿಂಗಮೂರ್ತಿ ಶರಣರು, ಉಳವಿ ಬಸವಕೇಂದ್ರದ ಲಿಂಗಮೂರ್ತಿ ಸ್ವಾಮೀಜಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 