ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಗೆ ಶರೀಫ ಭಾಜನ

ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಗೆ ಶರೀಫ ಭಾಜನ  Sharif selected for the Decennial State Youth Award

ಶಿಗ್ಗಾವಿ 26 :ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಬೆಂಗಳೂರ ಹಾಗೂ ಗೋವಿಂದರಾಜ ವಿಧಾಸಭಾ ಕ್ಷೇತ್ರ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರುತಿಸಿ ಶರೀಫ ಮಾಕಪ್ಪನವರ ಅವರಿಗೆ ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಯನ್ನು  ಕನ್ನಡ ಚಲನಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂಧರ್ಭದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ ನಿವೃತ್ತ ಐ ಎ ಎಸ್ ಅಧಿಕಾರಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಸಿ ಸೋಮಶೇಖರ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಹಾಗೂ ಸಿದ್ದರಾಮ ಮಹಾಸ್ವಾಮಿಗಳು ಇತರರು ಉಪಸ್ಥಿತರಿದ್ದರು.