ಮಹಿಳಾ ಸಾಕ್ಷರತೆಗೆ ಹೆಚ್ಚು ಒತ್ತು ನೀಡಲು ಜಿಲ್ಲಾಧಿಕಾರಿ ಸೂಚನೆ
ಹಾವೇರಿ: ಜಿಲ್ಲೆಯಲ್ಲಿ ಪುರುಷ ಮತ್ತು ಮಹಿಳೆಯರ ಮಧ್ಯ ಇರುವ ಸಾಕ್ಷರತಾ ಅಂತರವನ್ನು ತೊಡೆಯಲು ಮಹಿಳಾ ಸಾಕ್ಷರತಾ ಪ್ರಮಾಣವನ್ನು ಹೆಚ್ಚು ಮಾಡಲು ಕಾರ್ಯಕ್ರಮ ರೂಪಿಸಲು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ನಗರ ಸಾಕ್ಷರ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನಕ್ಷರಸ್ಥರನ್ನು ಸಾಕ್ಷರನ್ನಾಗಿ ಮಾಡುವ ಕೆಲಸ ನೊಬೇಲ್ ಕೆಲಸವಾಗಿದೆ. ಜಿಲ್ಲೆಯಲ್ಲಿ ಶೇ.95ರಷ್ಟು ಸಾಕ್ಷರತಾ ಪ್ರಮಾಣವನ್ನು ಸಾಧಿಸುವ ನಿಟ್ಟಿನಲ್ಲಿ ವಿವಿಧ ಸ್ವಯಂ ಸೇವಾ ಸಂಘಗಳು, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮಿಗಳ ನೆರವು ಪಡೆದು ಅವರನ್ನು ಈ ಕಾರ್ಯಕ್ರಮದಲ್ಲಿ ಸಹಭಾಗಿಗಳನ್ನಾಗಿ ಮಾಡಿಕೊಂಡು ನಿಗಧಿತ ಗುರಿ ಸಾಧಿಸುವಂತೆ ಕಾರ್ಯಕ್ರಮ ಆಯೋಜಿಸಲು ಅವರು ಸೂಚಿಸಿದರು.
ಜಿಲ್ಲೆಯ ಪುರಷ ಸಾಕ್ಷರತೆ ಶೇ.84.22ರಷ್ಟಿದೆ ಹಾಗೂ ಮಹಿಳಾ ಸಾಕ್ಷರತೆ 70.65 ರಷ್ಟಿದೆ. ಒಟ್ಟು ಸಾಕ್ಷರತೆ 77.60 ರಷ್ಟಿದೆ. ಪುರುಷ ಮತ್ತು ಮಹಿಳೆಯರ ಸಾಕ್ಷರತಾ ಪ್ರಮಾಣದ ವ್ಯತ್ಯಾಸ 13.57 ರಷ್ಟಿದ್ದು, ಮಹಿಳಾ ಸಾಕ್ಷರತೆಗೆ ಹೆಚ್ಚು ಒತ್ತು ನೀಡಬೇಕು. ಈ ಅಂತರ ಕಡಿಮೆಯಾಗಬೇಕು. 2021ರ ವೇಳೆಗೆ ಜಿಲ್ಲೆಯಲ್ಲಿ ಶೇ.95ರಷ್ಟು ಸಾಕ್ಷರತೆ ಸಾಧಿಸಬೇಕು ಎಂದು ಸೂಚಿಸಿದರು.
ಸಾಕ್ಷರತಾ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಇಲಾಖಾ ಅಧಿಕಾರಿಗಳು ಸಹಕಾರ ನೀಡಬೇಕು. ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗೀಗಳಾಗಬೇಕು ಎಂದು ಸೂಚಿಸಿದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಅವರು ಜಿಲ್ಲೆಯಲ್ಲಿ ಅನುಷ್ಠಾನಗೊಂಡ ಸಾಕ್ಷರತಾ ಕಾರ್ಯಕ್ರಮಗಳ ಪ್ರಗತಿ ಮಂಡಿಸಿದರು ಹಾಗೂ 2018-19 ನೇ ಸಾಲಿನಲ್ಲಿ 25,404 ಕಲಿಕಾಥರ್ಿಗಳು ಮೌಲ್ಯಮಾಪನ ಹಂತದಲ್ಲಿದ್ದಾರೆ ಹಾಗೂ 2019-20 ನೇ ಸಾಲಿನಲ್ಲಿ ಸುಮಾರು 15,000 ಅನಕ್ಷರಸ್ಥರ ಸಮೀಕ್ಷೆ ಕಾರ್ಯ ನಡೆದಿರುತ್ತದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಕಾರ್ಯಕ್ರಮ ಸಹಾಯಕರು ಸಿ. ಎಚ್. ಕೂಸನೂರ ಇತರರು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 