‘ಒಗ್ಗಟ್ಟಿನ ಭಾರತ’ ಬಿಂಬಿಸಲು ಭಾನುವಾರ ದೀಪಗಳನ್ನು ಬೆಳಗಿಸಿ-ಪ್ರಧಾನಿ
ನವದೆಹಲಿ, ಏಪ್ರಿಲ್ 3, ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಒಗ್ಗಟ್ಟಿನ ಭಾರತದ ಚಿತ್ರಣ ಬಿಂಬಿಸಲು ಮತ್ತು ಅಂಧಕಾರ ಕೊನೆಗೊಳಿಸಲು ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ವಿದ್ಯುತ್ ದೀಪಗಳನ್ನು ಸ್ವಿಚ್ ಆಫ್ ಮಾಡಿ ದೀಪಗಳು, ಮೇಣದ ಬತ್ತಿಗಳನ್ನು ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದಾರೆ.
ಶುಕ್ರವಾರ ವೀಡಿಯೊ ಸಂದೇಶದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, 'ಈ ಭಾನುವಾರ, ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ನಿಮ್ಮ ಬಾಗಿಲು ಅಥವಾ ಬಾಲ್ಕನಿಯಲ್ಲಿ 9 ನಿಮಿಷಗಳ ಕಾಲ ಮೇಣದ ಬತ್ತಿ, ದೀಪ, ಟಾರ್ಚ್ ಅಥವಾ ನಿಮ್ಮ ಫೋನ್ನ ಬ್ಯಾಟರಿ ಬೆಳಕನ್ನು ಬೆಳಗಿಸಿ. ಕೊರೊನವೈರಸ್ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ಒಬ್ಬಂಟಿಯಾಗಿಲ್ಲ ಎಂಬ ವಿಶ್ವಾಸವನ್ನು ಇದು ನಮ್ಮೆಲ್ಲರಿಗೂ ನೀಡುತ್ತದೆ.’ ಎಂದು ಹೇಳಿದ್ದಾರೆ. ಇದೇ ಸಮಯದಲ್ಲಿ ಜನರು ತಮ್ಮ ಮನೆಗಳ ಹೊರಗೆ ಜಮಾಯಿಸಬಾರದು ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಮಾರ್ಚ್ 22ರಂದು ಕರೆ ನೀಡಲಾಗಿದ್ದ ಜನತಾ ಕರ್ಫ್ಯೂ ವೇಳೆ ಇದೇ ರೀತಿ ಜನರು ಮನೆ ಮುಂದೆ ಬಂದು ಚಪ್ಪಾಳೆ, ಜಾಗಟೆ ಬಾರಿಸಬೇಕೆಂಬ ಪ್ರಧಾನಿಯವರ ಮನವಿಗೆ ಉತ್ತಮ ಸ್ಪಂದನೆ ದೊರೆತಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 