ಶಿರಹಟ್ಟಿ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಅವರ ಆದರ್ಶಗಳನ್ನು ಅಳವಡಿಸಿಕೋಳ್ಳೊಣ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ
ಲೋಕದರ್ಶನ ವರದಿ
ಶಿರಹಟ್ಟಿ 15: ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಭಾರತ ರತ್ನ, ಸಂವಿದಾನ ಶಿಲ್ಪಿ ಡಾ. ಬಾಬಾ ಸಾಹೇಬ ಭೀಮರಾವ್ ಅಂಬೇಡ್ಕರ್ ಅವರ 128ನೇ ಜಯಂತಿ ಕಾರ್ಯಕ್ರಮವನ್ನು ಅಂಬೇಡ್ಕರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರೊಂದಿಗೆ ಮಾಡಿ ದೀಪ ಬೇಳಗುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಮಾತನಾಡುತ್ತಾ, ಡಾ. ಅಂಬೇಡ್ಕರ್ ಅವರು ಸ್ವತಃ ಒಬ್ಬ ದಲಿತ ವ್ಯಕ್ತಿಯಾದರೂ ಸಹ ಸಮಾಜದ ಉದ್ಧಾರಕ್ಕಾಗಿ ಸಮಾನತೆಯ ಸಮಾಜಕ್ಕಾಗಿ ತಮ್ಮ ಇಡೀ ಜೀವನವನ್ನೇ ಅಪರ್ಿಸಿ, ಭಾರತ ಸಂವಿಧಾನ ರಚಿಸಿ, ಭಾರತ ರತ್ನವನ್ನು ಪಡೆದ ಮಹಾನ ವ್ಯಕ್ತಿಯಾಗಿ, ದೇಶ ಕಂಡ ಅಪ್ರತಿಮ ನಾಯಕ ಹಾಗೂ ಚಿಂತಕರಾಗಿದ್ದರು. ಸರ್ವರಿಗೂ ಸಮಬಾಳು ಸಮಪಾಲು ತತ್ವದಲ್ಲಿ ಪ್ರಜಾಪ್ರಭುತ್ವದ ವಿಶೇಷ ಮಾನದಂಡವಾದ ಸಂವಿಧಾನ ರಚಿಸಿದ ಇವರು ಸರ್ವಕಾಲಕ್ಕು ಸರ್ವರಿಗೂ ಮಾದರಿಯಾಗಿದೆ ಎಂದು ನುಡಿದರು. ರಾಮಣ್ಣ ಡಂಬಳ, ತಿಪ್ಪಣ್ಣ ಕೊಂಚೀಗೇರಿ, ಸಂದೀಪ ಕಪ್ಪತ್ತನವರ, ಗುಂಡಪ್ಪಗೌಡ್ರ ಪಾಟೀಲ, ರಾಚನಗೌಡ ಅಜ್ಜನಗೌಡ್ರ, ಬಸವರಾಜ ಗೋದಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 