ಶಿರಹಟ್ಟಿ: ಡಾ. ಅಂಬೇಡ್ಕರ ಅವರ ತತ್ವಾದರ್ಶ ಅಳವಡಿಸಿಕೊಳ್ಳಿ: ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮುಗಳಿ
ಲೋಕದರ್ಶನ ವರದಿ
ಶಿರಹಟ್ಟಿ 15: ನಗರದ ಪಟ್ಟಣ ಪಂಚಾಯತಿ ಕಾರ್ಯಲಯದಲ್ಲಿ ಸಂವಿದಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 128ನೇ ಜಯಂತೋತ್ಸವವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೇಳಗುವದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಮ್.ಕೆ.ಮುಗಳಿ ಡಾ. ಅಂಬೇಡ್ಕರ್ ಅವರು ಸಮಾನತೆಯ ಸಮಾಜಕ್ಕಾಗಿ ತಮ್ಮ ಬದುಕನ್ನೆ ಸಮರ್ಪಿಸಿಕೊಂಡ ದೇಶ ಕಂಡ ಅಪ್ರತಿಮ ನಾಯಕ ಹಾಗೂ ಚಿಂತಕರಾಗಿದ್ದರು. ಸ್ವಸಾಮಥ್ರ್ಯದಿಂದ ವಿಶ್ವಮಾನ್ಯರಾದ ಹಾಗೂ ಸರ್ವರಿಗೂ ಸಮಬಾಳು ಸಮಪಾಲು ತತ್ವದಲ್ಲಿ ಪ್ರಜಾಪ್ರಭುತ್ವದ ವಿಶೇಷ ಮಾನದಂಡವಾದ ಸಂವಿಧಾನ ನಮಗೊದಗಿಸಿದ ಡಾ. ಅಂಬೇಡ್ಕರ ರವರ ತತ್ವಾದರ್ಶ ಸರ್ವಕಾಲಕ್ಕು ಸರ್ವರಿಗೂ ಅನುಕರಣಿಯ. ಅವರ ತತ್ವಾದರ್ಶವನ್ನು ನಾವೆಲ್ಲ ನಮ್ಮ ಜೀವನದೂದ್ದಕ್ಕೂ ಅಳವಡಿಸಿಕೊಂಡು ನಡೆಯುವದು ನಾವು ಅವರಿಗೆ ಸಲ್ಲಿಸುವ ನೀಜವಾದ ಗೌರವವಾಗಿದೆ ಎಂದು ಹೇಳಿದರು.
ಅಶ್ವತ ಪೂಜಾರ, ಗುರುಪ್ರಸಾದ ಸಜ್ಜನ, ಮಂಜುನಾಥ ಹರಿಜನ, ಜೆ.ಐ.ಜಾಲಿಕಟ್ಟಿ, ದೇವಪ್ಪ ಸ್ವಾಮಿ, ಗುರುನಾಥ ಪಾತಾಳಿ, ಬಸವರಾಜ ಹೋಸುರ, ಅರುಣ ಪರಬತ, ಜಯಮ್ಮ ಸುಣಗಾರ, ಮಂಜುನಾಥ ಕಪ್ಪತ್ತನವರ, ಶರಣಪ್ಪ ಗೌಳಿ, ಉಡಚಪ್ಪ ನೀಲಣ್ಣವರ, ಮಲಿಯಪ್ಪ ಕಂಟೆಪ್ಪನವರ ಮುಂತಾದವರು ಕಾರ್ಯಕ್ರಮದಲ್ಲಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 