ಶೀರೂರು ವಿಧಿವಶ: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಉಡುಪಿ: ಶಿರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾದ ಹಿನ್ನೆಲೆಯಲ್ಲಿ ಇಂದು ಉಡುಪಿಯ ರಥಬೀದಿ ಸ್ತಬ್ಧವಾಗಿದೆ. ನಗರದ ಎಲ್ಲ ಶಾಲಾ- ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದ್ದು, ಶಾಲಾ-ಕಾಲೇಜು ಸೇರಿದಂತೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶಿರೂರು ಸ್ವಾಮೀಜಿಗಾಗಿ ಶೋಕಾಚರಣೆ ಮಾಡುತ್ತಿದ್ದಾರೆ. ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಗೌರವಾರ್ಥವಾಗಿ ವ್ಯಾಪಾರ ವಹಿವಾಟು ಬಂದ್ ಮಾಡಿದ್ದಾರೆ. ಈ ಮೂಲಕ ಶಿರೂರು ಸ್ವಾಮೀಜಿಗಳ ಅಸಹಜ ಸಾವಿಗೆ ಉಡುಪಿ ಜನತೆ ಕಂಬನಿ ಮಿಡಿಯುತ್ತಿದ್ದಾರೆ. ಈಗಾಗಲೇ ಮಠದ ಮುಂದೆ ಅಪಾರ ಭಕ್ತರು ನೆರೆದಿದ್ದಾರೆ.
ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಹತ್ತಿಯ ಬುಟ್ಟಿ ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕಾಗಿ ಸಾಂಪ್ರದಾಯಿಕ ಬುಟ್ಟಿ ತಂದಿದ್ದು, ಭಕ್ತರು ಹತ್ತಿಯನ್ನು ಬುಟ್ಟಿಯಲ್ಲಿ ಹಾಕುತ್ತಿದ್ದಾರೆ. ಬಳಿಕ ಮಠದ ಭಕ್ತರು ಬುಟ್ಟಿಯಲ್ಲಿ ಮೃತ ಶರೀರ ಹೊರಲಿದ್ದಾರೆ. ಇಂದು ಸಂಜೆ ಸ್ವಾಮೀಜಿಗಳ ಅಂತ್ಯಕ್ರಿಯೆ ನೇರವೇರಲಿದೆ.
ಉಡುಪಿ ಮಠದ ಸಂಪ್ರದಾಯದಂತೆ ಸಂಸ್ಕಾರ ಮಾಡಲಾಗುತ್ತಿದೆ. ಆದ್ದರಿಂದ ಶ್ರೀಗಳ ಶರೀರವನ್ನು ಮೊದಲು ಕೃಷ್ಣಮಠಕ್ಕೆ ಕೊಂಡೊಯ್ಯಲಾಗುತ್ತದೆ. ಬಳಿಕ ಮಠದ ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ ಶ್ರೀ ಕೃಷ್ಣ ದೇವರ ದರ್ಶನವನ್ನು ಮಾಡಿಸಲಾಗುತ್ತದೆ.
ನಂತರ ಶಿರೂರು ಸ್ವಾಮೀಜಿಯ ಮೂಲಮಠವಾದ ಕಾಪುವಿನ ಹಿರಿಯಡ್ಕದಕ್ಕೆ ಮೃತದೇವನ್ನು ಕೊಂಡೊಯ್ದು ಮಣ್ಣಿನಡಿ ಹೂಳುವ ಮೂಲಕ ಸಂಸ್ಕಾರ ಮಾಡಲಾಗುತ್ತದೆ. ಅಂತ್ಯ ಸಂಸ್ಕಾರ ಮಾಡುವಾಗ ಪೂಜಾ ಸಾಮಾಗ್ರಿಗಳನ್ನು ಅವರ ಶರೀರದ ಜೊತೆ ಇರಿಸಿ ಬೃಂದಾವನ ನಿರ್ಮಿಸಲಾಗುತ್ತದೆ. ಜೊತೆಗೆ ಉಪ್ಪು, ಹತ್ತಿ, ಕಾಳುಮೆಣಸು ಮತ್ತು ಕರ್ಪೂರಗಳನ್ನು ತುಂಬಿಸಿ ಸಮಾಧಿ ಮಾಡಲಾಗುತ್ತದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 