ಅಜಿತ್ ಪವಾರ್ ಗೆ ಶಿವಸೇನೆ ಬಿಗ್ ಆಫರ್ ...!
ಮುಂಬೈ, 25 ದಿನದಿಂದ ದಿನಕ್ಕೆ ಬದಲಾಗುತ್ತಿರುವ ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಇಂದು ಮತ್ತೊಂದು ಕುತೂಹಲಕಾರಿ ತಿರುವು ಪಡೆದುಕೊಳ್ಳುತ್ತಿದೆ. ಎನ್ ಸಿ ಪಿ ಗೆ ಎರಡೂವರೆ ವರ್ಷ ಗಳ ಕಾಲ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಾನು ಸಿದ್ಧ ಎಂದು ಹೊಸ ಮಿತ್ರ ಪಕ್ಷ ಶಿವಸೇನಾ ಸಿದ್ದವಾಗಿದೆ ಎಂದು ವರದಿಯಾಗಿದೆ. ಯಾರು ಊಹೆಮಾಡದ ರೀತಿ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಸರಿ ದಾರಿಗೆ ತರಲು, ಬಿಜೆಪಿ ಹಿಡಿತದಿಂದ ಅವರನ್ನು ಹೊರತರಲು ಶಿವಸೇನೆ ಈ ಪ್ರಸ್ತಾಪ ಮುಂದಿಟ್ಟಿದೆ ಎನ್ನಲಾಗಿದೆ. ಅಜಿತ್ ಪವಾರ್ ಅವರಿಗೆ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ನೀಡುವ ಮೂಲಕ ಅವರನ್ನು ಸಂತೃಪ್ತಿ ಪಡಿಸಲು ಪ್ರಯತ್ನಿಸುತ್ತಿದೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ಕೈಗೊಂಡಿರುವ ನಿರ್ಣಯವನ್ನು ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್ ಮತ್ತು ಎನ್ಸಿಪಿ ಸುಪ್ರೀಂ ಕೋಟರ್್ ಮೊರೆ ಹೋಗಿರುವ ನಡುವೆಯೇ ಮಿತ್ರ ಪಕ್ಷ ಶಿವಸೇನೆ ಈ ನಿರ್ಣಯಕ್ಕೆ ಬಂದಿರುವುದು ಗಮನಾರ್ಹ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 