ಅಜಿತ್ ಪವಾರ್ ಗೆ ಶಿವಸೇನೆ ಬಿಗ್ ಆಫರ್ ...!
ಮುಂಬೈ, 25 ದಿನದಿಂದ ದಿನಕ್ಕೆ ಬದಲಾಗುತ್ತಿರುವ ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಇಂದು ಮತ್ತೊಂದು ಕುತೂಹಲಕಾರಿ ತಿರುವು ಪಡೆದುಕೊಳ್ಳುತ್ತಿದೆ. ಎನ್ ಸಿ ಪಿ ಗೆ ಎರಡೂವರೆ ವರ್ಷ ಗಳ ಕಾಲ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಾನು ಸಿದ್ಧ ಎಂದು ಹೊಸ ಮಿತ್ರ ಪಕ್ಷ ಶಿವಸೇನಾ ಸಿದ್ದವಾಗಿದೆ ಎಂದು ವರದಿಯಾಗಿದೆ. ಯಾರು ಊಹೆಮಾಡದ ರೀತಿ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಸರಿ ದಾರಿಗೆ ತರಲು, ಬಿಜೆಪಿ ಹಿಡಿತದಿಂದ ಅವರನ್ನು ಹೊರತರಲು ಶಿವಸೇನೆ ಈ ಪ್ರಸ್ತಾಪ ಮುಂದಿಟ್ಟಿದೆ ಎನ್ನಲಾಗಿದೆ. ಅಜಿತ್ ಪವಾರ್ ಅವರಿಗೆ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ನೀಡುವ ಮೂಲಕ ಅವರನ್ನು ಸಂತೃಪ್ತಿ ಪಡಿಸಲು ಪ್ರಯತ್ನಿಸುತ್ತಿದೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ಕೈಗೊಂಡಿರುವ ನಿರ್ಣಯವನ್ನು ರದ್ದುಪಡಿಸುವಂತೆ ಕೋರಿ ಕಾಂಗ್ರೆಸ್ ಮತ್ತು ಎನ್ಸಿಪಿ ಸುಪ್ರೀಂ ಕೋಟರ್್ ಮೊರೆ ಹೋಗಿರುವ ನಡುವೆಯೇ ಮಿತ್ರ ಪಕ್ಷ ಶಿವಸೇನೆ ಈ ನಿರ್ಣಯಕ್ಕೆ ಬಂದಿರುವುದು ಗಮನಾರ್ಹ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 