ಶಿವರಾತ್ರಿ ಅಂಗವಾಗಿ ಶಿವಯೋಗ ಕಾರ್ಯಕ್ರಮ
Shiva Yoga program as part of Shivaratri
ಹುಬ್ಬಳ್ಳಿ 13: ಬಸವ ಕೇಂದ್ರದ ವತಿಯಿಂದ ಶಿವರಾತ್ರಿ ಅಂಗವಾಗಿ ಶಿವಯೋಗ (ಸಾಮೂಹಿಕ ಇಷ್ಠಲಿಂಗ ಪೂಜೆ ಹಾಗೂ ಯೋಗ) ಕಾರ್ಯಕ್ರಮ ಹಾಗೂ ಶರಣ ಡೋಹರ ಕಕ್ಕಯ್ಯನವರ ಜಯಂತಿ ಕಾರ್ಯಕ್ರಮವನ್ನು ರವಿವಾರ ದಿನಾಂಕ 15-02-2026 ರಂದು ಮುಂಜಾನೆ 9 ಗಂಟೆಗೆ ಗೋಕುಲ ರಸ್ತೆ, ಮುರಾರ್ಜಿನಗರ 2ನೇ ಹಂತ, ಬಸವ ಕೇಂದ್ರದ (ವಿ.ಎಂ.ಕೊಟಗಿ ಬಸವ ಸಂಸ್ಕೃತಿ ಶಾಲೆಯ) ಸಭಾಭವನದಲ್ಲಿ ಆಯೋಜಿಸಲಾಗಿದೆ. ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ ಅವರು ಶಿವಯೋಗ ಚಿಂತನ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ. ಕೊಪ್ಪಳದ ಶರಣ ತತ್ವ ಚಿಂತಕರಾದ ಡಾ ಸಂಗಮೇಶ ಕಲಹಾಳ್ ಅವರು ಅತಿಥಿಗಳಾಗಿ ಭಾಗವಹಿಸುವರು. ಆಸಕ್ತ ಬಸವಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ತಿಳಿಸಿದ್ದಾರೆ. ಇಷ್ಟಲಿಂಗ ದೀಕ್ಷೆ ನೀಡಲಾಗುವುದು. ಲಿಂಗಗಳು, ಲಿಂಗ ಚೀಲಗಳು, ವಿಭೂತಿ, ರುದ್ರಾಕ್ಷಿ, ಪುಸ್ತಕಗಳು ಲಭ್ಯವಿರುತ್ತವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 