ಮಾ.23ರಂದು ಶಿವದಾಸಿಮಯ್ಯನವರ ಜಯಂತ್ಯೋತ್ಸವ
Shivadasimayya's Jayanti celebration on March 23rd
ಮುಧೋಳ 18: ತಾಲೂಕಿನ ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಆಶ್ರಯದಲ್ಲಿ ಕುಲಗುರು ಜಗದಾಚಾರ್ಯ ಶ್ರೀ ಶಿವದಾಸಿಮಯ್ಯನವರ ಜಯಂತ್ಯೋತ್ಸವ ಹಾಗೂ ಶಿವದಾಸಿಮಯ್ಯ ಪತ್ತಿನ ಸೌಹಾರ್ಧ ಸಹಕಾರಿ ನಿ., ಇದರ ವಾರ್ಷಿಕೋತ್ಸವ ಸಮಾರಂಭ ಮಾ.23 ರಂದು ಸಂಜೆ 5 ಗಂಟೆಗೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಮುನವಳ್ಳಿ ತಿಳಿಸಿದ್ದಾರೆ.
ಕುಂದರಗಿ ಶ್ರೀ ಕ್ಷೇತ್ರ ಸುರಗಿರಿ ಬೆಟ್ಟದ ಸುರಗಿರಿ ಶಕ್ತಿ ಪೀಠದ ಧರ್ಮಾಧಿಕಾರಿ ಪ.ಪೂ.ಲಕ್ಷ-್ಮಣ ಶರಣರು ದಿವ್ಯ ಸಾನಿಧ್ಯ ವಹಿಸುವರು, ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಪ್ರಕಾಶ ಈ. ಗಂಗಣ್ಣವರ ಅಧ್ಯಕ್ಷತೆವಹಿಸುವರು, ಶಸ್ತ್ರ ಚಿಕಿತ್ಸಕ ಹಾಗೂ ಸಾಹಿತಿ ಡಾ.ಶಿವಾನಂದ ಮ. ಕುಬಸದ ಕಾರ್ಯಕ್ರಮ ಉದ್ಘಾಟಿಸುವರು, ಹುನ್ನೂರ ಸರ್ಕಾರಿ ಪ್ರಥಮ ಧರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಶಂಕರ ಲ. ಅರಬಳ್ಳಿ ಮುಖ್ಯ ಅತಿಥಿ ಸ್ಥಾನವಹಿಸುವರು, ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷೆ ಕಮಲಾ ಶಿ. ಕುಬಸದ, ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಆರ್. ಬದಾಮಿ ಹಾಗೂ ಉಪಸ್ಥಿತರಿರುವರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 