ಪತ್ರಿಕೋದ್ಯಮದಲ್ಲಿ ಶಿವಾನಂದಗೆ ರಾ್ಯಂಕ್
Shivananda's rank in journalism
ಮಹಾಲಿಂಗಪುರ 09: ನಗರದ ನಿವಾಸಿ, ಯುವ ಪತ್ರಕರ್ತ ಶಿವಾನಂದ ನೇಗಿನಾಳ ಅವರು ಎಂ ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 5ನೇ ರಾ್ಯಂಕ್ ಗಳಿಸಿದ್ದು, ಮಂಗಳವಾರ ನಡೆದ ತುಮಕೂರು ವಿಶ್ವವಿದ್ಯಾನಿಲಯದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿ ದೆಸೆಯಲ್ಲಿಯೇ ಸಾಹಿತ್ಯದ ಆಸಕ್ತಿ ಬೆಳೆಸಿಕೊಂಡು ಎರಡು ಕೃತಿಗಳನ್ನು ರಚಿಸಿದ್ದಾರೆ. ಸದ್ಯ ತುಮಕೂರಿನಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವಾನಂದ ಅವರು ಡಿಪ್ಲೊಮಾ ಇಂಜಿನಿಯರಿಂಗ್ ಪದವಿ ಪಡೆದು, ಆಸಕ್ತಿಗೆ ತಕ್ಕಂತೆ ಮಾಧ್ಯಮ ಕ್ಷೇತ್ರಕ್ಕೆ ಪಾದಾರೆ್ಣ ಮಾಡಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮುಧೋಳದ ಎಸ್ ಆರ್ ಕಂಠಿ ಮಹಾವಿದ್ಯಾಲಯದಲ್ಲಿ ಬಿಎ ಹಾಗೂ ತುಮಕೂರಿನ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಎಂ. ಎ ಪದವಿ ಪಡೆದಿದ್ದಾರೆ.
ಶಿವಾನಂದ ನೇಗಿನಾಳ ಸಾಧನೆಗೆ ಕಂಠಿ ಕಾಲೇಜಿನ ಪ್ರಾಚಾರ್ಯ ಜಿಗಬಡಗಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ ಸೇರಿ ನಗರದ ಅನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 