ಪತ್ರಿಕೋದ್ಯಮದಲ್ಲಿ ಶಿವಾನಂದಗೆ ರಾ್ಯಂಕ್
Shivananda's rank in journalism
ಮಹಾಲಿಂಗಪುರ 09: ನಗರದ ನಿವಾಸಿ, ಯುವ ಪತ್ರಕರ್ತ ಶಿವಾನಂದ ನೇಗಿನಾಳ ಅವರು ಎಂ ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 5ನೇ ರಾ್ಯಂಕ್ ಗಳಿಸಿದ್ದು, ಮಂಗಳವಾರ ನಡೆದ ತುಮಕೂರು ವಿಶ್ವವಿದ್ಯಾನಿಲಯದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿ ದೆಸೆಯಲ್ಲಿಯೇ ಸಾಹಿತ್ಯದ ಆಸಕ್ತಿ ಬೆಳೆಸಿಕೊಂಡು ಎರಡು ಕೃತಿಗಳನ್ನು ರಚಿಸಿದ್ದಾರೆ. ಸದ್ಯ ತುಮಕೂರಿನಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವಾನಂದ ಅವರು ಡಿಪ್ಲೊಮಾ ಇಂಜಿನಿಯರಿಂಗ್ ಪದವಿ ಪಡೆದು, ಆಸಕ್ತಿಗೆ ತಕ್ಕಂತೆ ಮಾಧ್ಯಮ ಕ್ಷೇತ್ರಕ್ಕೆ ಪಾದಾರೆ್ಣ ಮಾಡಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮುಧೋಳದ ಎಸ್ ಆರ್ ಕಂಠಿ ಮಹಾವಿದ್ಯಾಲಯದಲ್ಲಿ ಬಿಎ ಹಾಗೂ ತುಮಕೂರಿನ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಎಂ. ಎ ಪದವಿ ಪಡೆದಿದ್ದಾರೆ.
ಶಿವಾನಂದ ನೇಗಿನಾಳ ಸಾಧನೆಗೆ ಕಂಠಿ ಕಾಲೇಜಿನ ಪ್ರಾಚಾರ್ಯ ಜಿಗಬಡಗಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ ಸೇರಿ ನಗರದ ಅನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 