ಶೂ ಎಸೆತ ಯತ್ನ ಪ್ರಕರಣ : ಕಠಿಣ ಕ್ರಮಕ್ಕೆ ಆಗ್ರಹ
Shoe throwing attempt case: Demand for strict action
ಶೂ ಎಸೆತ ಯತ್ನ ಪ್ರಕರಣ : ಕಠಿಣ ಕ್ರಮಕ್ಕೆ ಆಗ್ರಹ
ಲೋಕದರ್ಶನ ವರದಿ
ಹೂವಿನಹಡಗಲಿ 09 : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶಬಿ.ಆರ್.ಗವಾಯಿ ಅವರತ್ತ ನ್ಯಾಯಾಲಯದಲ್ಲೇ ಶೂ ಎಸೆಯುವ ಯತ್ನಿಸಿದ ವಕೀಲ ಕಿಶೋರ್ ಎಂಬಾತನನ್ನು ಬಂಧಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಗುರುವಾರ ಸಂವಿಧಾನ ರಕ್ಷಣೆಗಾಗಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಮತ್ತು ಭಾರತ ಕಮ್ಯುನಿಸ್ಟ್ ಪಕ್ಷ ಸಿಪಿಐ ತಾಲೂಕು ವೇದಿಕೆ ವತಿಯಿಂದ ಶಾಸ್ತ್ರೀಯ ವೃತ್ತ ಬಳಿ ಪ್ರತಿಭಟನೆ ನಡೆಸಲಾಯಿತು.ಇದೇ ವೇಳೆ ಅ.ಭಾ.ದ.ಹ.ಆಂದೋಲನ ರಾಜ್ಯ ಉಪಾಧ್ಯಕ್ಷ ಹಲಗಿ ಸುರೇಶ , ಸಿಪಿಐ ತಾಲೂಕು ಕಾರ್ಯದರ್ಶಿ ಬಸವರಾಜ ಸಂಶಿ , ದಲಿತ ಸೇವಾ ಅದ್ಯಕ್ಷ ಸಿ.ದುರುಗೇಶ ಮಾತನಾಡಿ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ನ್ಯಾಯಾಲಯಕ್ಕೆ ಉನ್ನತ ಸ್ಥಾನ, ಗೌರವ ಎಲ್ಲವೂ ಇದೆ. ಇಂತಹ ಉನ್ನತ ಸ್ಥಾನದಲ್ಲಿನ ವ್ಯಕ್ತಿಗಳನ್ನೇ ಅವಮಾನಿಸುವಂತ ಹಂತ ತಲುಪಿರುವ ಬಲಪಂಥೀಯ ಕೋಮುವಾದಿಗಳು ದೇಶಕ್ಕೆ ಕಂಟಕವಾಗಲಿದ್ದಾರೆ. ನ್ಯಾಯಾಧೀಶರತ್ತ ಶೂ ಎಸೆಯಲು ಮುಂದಾದ ವಕೀಲ ಕಿಶೋರ್ ಎಂಬುವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳದೆ ಹೋದರೆ ನ್ಯಾಯಾಲಯಗಳ ಗೌರವ ಕುಂದಲಿದೆ ಎಂದರು.ಇಂತಹ ಘಟನೆ ಮರುಕಳಸದಂತೆ ಎಚ್ಚರ ವಹಿಸಬೇಕು. ನ್ಯಾಯಾಧೀಶರತ್ತ ಶೂ ಎಸೆಯಲು ಯತ್ನಿಸಿರುವ ಪ್ರಕರಣ ಅತ್ಯಂತ ಗಂಭೀರವಾದ ಸಂಗತಿಯಾಗಿದೆ. ಈ ಮತೀಯ ಕೋಮುವಾದ ಈಗಲೇ ಅಂತ್ಯವಾಗುವಂತೆ ನ್ಯಾಯಾಲಯ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಂತರ ಕಠಿಣ ಕ್ರಮಕ್ಕೆ ತಹಶಿಲ್ದಾರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಅಂಬೇಡ್ಕರ ಸೇನಾ ಸಮಿತಿ ಅಧ್ಯಕ್ಷ ಎ.ಭರಮಪ್ಪ.ಬಾಬು ಜಗಜೀವನರಾಂ ಸಂಘದ ಅಧ್ಯಕ್ಷ ಬಿ.ಆನಂದ.ಎಸ್.ಡಿ.ಪಿ.ಐ.ಪಕ್ಷದ.ಎ.ದೇವರಾಜ್.ದಡರ್.ಟಿ.ದೇವೇಂದ್ರ್ಪ.ಇತರರು ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 