ಶೋಪಿಯಾನ್ ಎನ್ಕೌಂಟರ್ ಐದು ಉಗ್ರರ ಹತ್ಯೆ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಸೋಪೋರ್, ಕುಪ್ವಾರ ದಾಳಿ ಬೆನ್ನಲ್ಲೇ ಮತ್ತೆ ಉಗ್ರರು ಶೋಪಿಯಾನ್ ನಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ 5 ಮಂದಿ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜಧಾನಿ ಶ್ರೀನಗರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಶೋಪಿಯಾನ್ ನಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಸೇನಾಪಡೆಗಳ ದಾಳಿಗೆ ಐದು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ.
ಸೇನಾ ಮೂಲಗಳ ಪ್ರಕಾರ ಶೋಪಿಯಾನ್ ನಲ್ಲಿ ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಸೇನಾಧಿಕಾರಿಗಳ ತಡ ರಾತ್ರಿಯಲ್ಲೇ ಪ್ರದೇಶವನ್ನು ಸುತ್ತುವರೆದಿದ್ದಾರೆ. ಅತ್ತ ಸೇನೆ ಆಗಮಿಸುತ್ತಿದ್ದಂತೆಯೇ ಎಚ್ಚೆತ್ತ ಉಗ್ರರು ಗುಂಡಿನ ಸುರಿಮಳೆ ಆರಂಭಿಸಿದ್ದಾರೆ. ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಕನಿಷ್ಠ ಐದು ಮಂದಿ ಉಗ್ರರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಉಗ್ರನ ಶವವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಮತದೇಹದ ಬಳಿ ಬಿದ್ದಿದ್ದ ಎಕೆ 47 ರೈಫಲ್ ಮತ್ತು ಹಲವು ಮ್ಯಾಗಜಿನ್ ಗಳನ್ನೂ ಕೂಡ ವಶಪಡಿಸಿಕೊಂಡಿದ್ದಾರೆ. ಮೃತ ಉಗ್ರನನ್ನು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರ ಉಮರ್ ಮಲಿಕ್ ಎಂದು ಗುರುತಿಸಲಾಗಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 