'ಜೈ ಹಿಂದ್ ಭಾರ್ಗವ' ಗೆ ಭರದಿಂದ ಚಿತ್ರೀಕರಣ
ಬೆಂಗಳೂರು 23: ಮಾಯಮ್ಮ ಸಿನಿ ಕ್ರಿಯೇಶನ್ಸ್ ಬೆಂಗಳೂರು ಅರ್ಿಸುವ “ಜೈ ಹಿಂದ್ ಭಾರ್ಗವ” ಕನ್ನಡ ಚಲನಚಿತ್ರ ಕಳೆದೊಂದು ವಾರದಿಂದ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ ಚಿತ್ರತಂಡ.
ಭಾರತದ ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ಮತ್ತು ಆಪರೇಶನ್ ಸಿಂಧೂರದ ಕಥಾ ವಸ್ತು ಹೊಂದಿದ್ದು, ಸತತ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ಹಾಡುಗಳಿಲ್ಲ. ಬೆಂಗಳೂರು,ಚಿಕ್ಕಬಳ್ಳಾಪೂರ, ಮೈಸೂರು, ಡೊಡ್ಡಬಳ್ಳಾಪೂರ,ಘಾಟಿ ಸುಬ್ರಮಣ್ಯ ಮೊದಲಾದ ಕಡೆ ಚಿತ್ರೀಕರಣ ನಡೆಸಲಿದೆ ಎಂದು ನಿರ್ದೇಶಕ ಎನ್.ಟಿ.ಜಯರಾಮ್ ತಿಳಿಸಿದ್ದಾರೆ.
ಈ ಚಿತ್ರದ ತಾರಾಗಣದಲ್ಲಿ ಮಾಸ್ಟರ್ ಚಿನ್ಮಯ್, ಮಾಸ್ಟರ್ ನಿಶ್ಚಲ್, ಕುಮಾರಿ ಪೂರ್ವಿಕ, ಚಲನಚಿತ್ರ ನಿರ್ದೇಶಕರಾದ ವಸಂತ್ಕುಮಾರ್, ರೋಹಿಣಿ ಮೈಸೂರ್, ಯಶೋದಮ್ಮ ,ಮನು ,ರವಿ , ಸುಪ್ರೀತ್ , ಮಂಜುರ್, ಗೀತಾನಂದಕುಮಾರ್ ಹಾಗೂ ವಿಶೇಷ ಸೈನ್ಯಾಧಿಕಾರಿ ಪಾತ್ರದಲ್ಲಿ ಚಲನಚಿತ್ರ ನಟ-ನಿರ್ದೇಶಕರಾದ ಹರಿಹರನ್.ಬಿ.ಪಿ ಅವರು ನಟಿಸುತ್ತಿದ್ದಾರೆ. ಛಾಯಾಗ್ರಹಣ ಭುವನ್ ರೆಡ್ಡಿ ,ವರ್ಣಾಲಂಕಾರ ಕಾಂತರಾಜು, ಸಂಕಲನ ಮುತ್ತುರಾಜ್ ಟಿ , ಸಂಗೀತ ಶಿವಸತ್ಯ , ಪತ್ರಿಕಾ ಸಂಪರ್ಕ ಕಾರ್ತಿಕ್, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ , ನಿರ್ಮಾಣ ನಿರ್ವಹಣೆ ಜವಾಬ್ದಾರಿ ಬೆಳ್ಳೂ ರಾಜು , ಸಹ ನಿರ್ದೇಶನ ಎಸ್ ಶ್ರೀನಿವಾಸ್ ಅವರದಿದೆ. ಈ ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆಯನ್ನು ಬರೆದು ಎನ್.ಟಿ. ಜಯರಾಮ್ ರೆಡ್ಡಿ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ನಿರ್ಮಾಪಕರು ಕುಮಾರಿ ತನ್ಮಯ್ ಎನ್ ಆಗಿದ್ದಾರೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಿ ನವಂಬರ್ನಲ್ಲಿ ಚಿತ್ರ ಬಿಡುಗಡೆ ಮಾಡುವ ಆಲೋಚನೆ ಚಿತ್ರತಂಡದ್ದಾಗಿದೆ.
ಡಾ.ಪ್ರಭು ಗಂಜಿಹಾಳ
ಮೊ:9448775346
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 