ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬು ಹೊಲಕ್ಕೆ ಬೆಂಕಿ: ರೈತನಿಗೆ ಭಾರೀ ನಷ್ಟ!
Short circuit causes fire in sugarcane field: Huge loss for farmer!
ಮುಂಡಗೋಡ 13 : ಮುಂಡಗೋಡದಿಂದ ಯಲ್ಲಾಪುರ ಕಡೆಗೆ ಸಂಪರ್ಕಿಸುವ ಮುಖ್ಯರಸ್ತೆಯ ಸಮೀಪದಲ್ಲಿರುವ ಸಾವಕ್ಕ ಜೀವನ ಅಗಡಿ ಅವರಿಗೆ ಸೇರಿದ ಹೊಲದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮಾಹಿತಿಯಂತೆ, ಒಟ್ಟು 10 ಎಕರೆ ವ್ಯಾಪ್ತಿಯ ಈ ಹೊಲದಲ್ಲಿ ಒಂದು ಎಕರೆ ಪ್ರದೇಶದಲ್ಲಿ ಬೀಜಕ್ಕಾಗಿ ಸಂಗ್ರಹಿಸಿ ಇಡಲಾಗಿದ್ದ ಕಬ್ಬು ಹಾಗೂ 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕುಳೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಸಂಪೂರ್ಣ ಹಾನಿಗೊಳಗಾಗಿದೆ. ಜೊತೆಗೆ, ಹೊಲದಲ್ಲಿ ಅಳವಡಿಸಿದ್ದ ಪೈಪ್ಲೈನ್ ಮತ್ತು ಜೆಟ್ ವ್ಯವಸ್ಥೆಯೂ ಬೆಂಕಿಯಿಂದ ಹಾನೀಗೀಡಾಗಿದೆ. ತಟ್ಟಿಹಳ್ಳಿ ಸರ್ವೇ ನಂಬರ್ 16 ಮತ್ತು 17 ರಲ್ಲಿರುವ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ.
ಹೊಲದ ಮೇಲ್ಭಾಗದಿಂದ ಹಾದು ಹೋಗಿರುವ ಥ್ರೀ-ಫೇಸ್ ವಿದ್ಯುತ್ ಲೈನ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿರಬಹುದೆಂದು ಹೊಲದ ಮಾಲೀಕ ತಿಳಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಶ್ರಮಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದಾಗ್ಯೂ, ಹೊಲದಲ್ಲಿ ಸಂಗ್ರಹಿಸಿ ಇಡಲಾಗಿದ್ದ ಕಬ್ಬಿನ ಬೀಜ ಸಂಪೂರ್ಣ ಸುಟ್ಟುಹೋಗಿದ್ದು, ರೈತನಿಗೆ ಗಮನಾರ್ಹ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಹಾನಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಹಾಗೂ ರೈತರು ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 