ಪಾಪು ನಿಧನಕ್ಕೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಕೊಪ್ಪಳ 18: ಧೀಮಂತ ಪತ್ರಕರ್ತ, ಸಾಹಿತಿ ಹಾಗೂ ನಾಡೋಜ ಪ್ರಶಸ್ತಿ ಪುರಸ್ಕೃತರಾದ ಡಾ.ಪಾಟೀಲ ಪುಟ್ಟಪ್ಪನವರು (102) ನಿಧನ ಹೊಂದಿರುದಕ್ಕೆ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದೆ.
ಡಾ.ಪಾಟೀಲ ಪುಟ್ಟಪ್ಪನವರ ಅಗಲಿಕೆಯಿಂದ ರಾಷ್ಟ್ರ ಮತ್ತು ರಾಜ್ಯ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ, ದಿವಂಗತರು ಕೇವಲ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕನ್ನಡ ನಾಡು ನುಡಿ,ಕನ್ನಡ ಪರ ಹೋರಾಟವಾಗಿದ್ದ ಗೋಕಾಕ್ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದು ಹೋರಾಟವನ್ನು ಯಶಸ್ವಿಗೊಳಿಸಿದ್ದರು. ಇವರ ನಿಧನದಿಂದ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತೀವ್ರ ಶೋಕ ವ್ಯಕ್ತ ಪಡಿಸಿ ಶ್ರದ್ಧಾಂಜಲಿಯನ್ನು ಅಪರ್ಿಸಿದ್ದಾರೆ.
ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಎಂ. ಸಾದಿಕ ಅಲಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರು ಜಿ.ಎಸ್.ಗೋನಾಳ್, ರಾಜ್ಯ ಕಾರ್ಯಕಾರಣಿ ನಾಮನಿದರ್ೇಶನ ಸದಸ್ಯ ಹರೀಶ್ ಎಚ್.ಎಸ್, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಎನ್.ಎಂ ದೊಡ್ಡಮನಿ, ಜಿಲ್ಲಾ ಖಜಾಂಚಿ ಸಿರಾಜ್ ಬಿಸರಳ್ಳಿ, ಪತ್ರಿಕಾ ಭವನ ನಿಮರ್ಾಣದ ಸಮಿತಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಉಪಾಧ್ಯಕ್ಷ ಬಸವರಾಜ್ ಗುಡ್ಲಾನೂರು, ಶಿವರಾಜ್ ನುಗಡೋಣಿ, ವೀರಣ್ಣ ಕಳ್ಳಿಮನಿ, ರುದ್ರಗೌಡ ಪಾಟೀಲ್, ರವಿಕುಮಾರನಾಯಕ್, ವೈ.ನಾಗರಾಜ್, ಪವನ್ ದೇಶಪಾಂಡೆ, ರಾಜು ಬಿ.ಆರ್, ಎಚ್.ವಿ.ರಾಜಾಭಕ್ಷಿ, ರವಿಚಂದ್ರ ಬಡಿಗೇರ, ಶಿವಕುಮಾರ್ ಹಿರೇಮಠ, ಬದ್ರಿನಾರಾಯಣ ಪುರೋಹಿತ್, ಎಂ.ಡಿ.ಖಲೀಲ್ಉಡೇವು, ಭರತ್ ಕಂದಕೂರು, ಮುಸ್ತಾಫ್ ಹಾಗೂ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 