22ರಿಂದ ಬಡೇಕೊಳ್ಳಮಠದಲ್ಲಿ ಶ್ರಾವಣ ಮಾಸದ ಜಾತ್ರಾ ಮಹೋತ್ಸವ
Shravan month fair to be held at Badekolla Math from 22nd
ಬೆಳಗಾವಿ 18: ತಾಲೂಕಿನ ಪಾವನಕ್ಷೇತ್ರ ಬಡೇಕೊಳ್ಳಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ದಿ. 22 ಮತ್ತು 23ರಂದು ನಾಗೇಂದ್ರ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಜರುಗಲಿದೆ.
ಶುಕ್ರವಾರ ದಿ. 22ರಂದು ಮಾಸ್ತಮರಡಿ ಹಾಗೂ ತಾರಿಹಾಳ ಗ್ರಾಮಗಳಿಂದ ಪಾಲಕಿ ಬರಮಾಡಿಕೊಳ್ಳುವುದು. ನಂತರ ಭಜನೆ, ಜಾಗರಣೆ ಹಾಗೂ ರಾತ್ರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗವವು.
ಶನಿವಾರ ದಿ. 23 ರಂದು ಮುಂಜಾನೆ 9 ಗಂಟೆಗೆ ನಾಗೇಂದ್ರ ಮಹಾಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭೀಷೇಕ, 11 ಗಂಟೆಗೆ ಅಜ್ಜನವರ ಪಾದಪೂಜೆ, 11.30ಕ್ಕೆ ಪಾಲಕಿ ಉತ್ಸವ 12.30ಕ್ಕೆ ರಥೋತ್ಸವ ಮಧ್ಯಾಹ್ನ 2 ಗಂಟೆಗೆ ಮಹಾಪ್ರಸಾದ ಸಂಜೆ 4ಗಂಟೆಗೆ ಪಾಲಕಿ ಬೀಳ್ಕೊಡುವದರೊಂದಿಗೆ ಜಾತ್ರೆ ಸಂಪನ್ನಗೊಳ್ಳುವುದೆಂದು ಮಠದ ನಾಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 