ಶ್ರೀ ವಾಲ್ಮೀಕಿ ಕಲಾ ಸೇವಾ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ
Shri Valmiki Kala Seva State Level Award Presentation
ಉರಾಳಾಪುರ 28: ಶ್ರೀ ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆ, ಹೊಸಪೇಟೆ ವತಿಯಿಂದ ಶ್ರೀ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ 13ನೇ ವರ್ಷದ ವಾರ್ಷಿಕೋತ್ಸವ ಹಾಗೂ 2026ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಹಳ್ಳೂರು ಗ್ರಾಮದ ಶ್ರೀ ಮುರುಗಪ್ಪ ಬಸಪ್ಪ ಮಾಲಗಾರ ಅವರಿಗೆ ಸಮಾಜ ಸೇವೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ "ಶ್ರೀ ವಾಲ್ಮೀಕಿ ಕಲಾ ಸೇವಾ ರಾಜ್ಯ ಮಟ್ಟದ ಪ್ರಶಸ್ತಿ" ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆಯ ಅಧ್ಯಕ್ಷರಾದ ಅನುರಾಧಾ ವಾಲ್ಮೀಕಿ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಸರ್ಕಾರಿ ಅಧಿಕಾರಿಗಳು, ಗಣ್ಯರು, ಗುರುಹಿರಿಯರು, ಕಲಾವಿದರು, ಸಾಧಕರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 