ಕೊಲ್ಕತ್ತಾ ಪೋರ್ಟ್ಗೆ ಶ್ಯಾಮ್ ಪ್ರಸಾದ್ ಮುಖರ್ಜಿ ಹೆಸರು ಮರು ನಾಮಕರಣ
ಕೋಲ್ಕತ್ತಾ, ಜ 12: ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೊಲ್ಕತ್ತಾ ಪೋರ್ಟ್ ಟ್ರಸ್ಟ್ ಅನ್ನು ಭಾರತೀಯ ಜನಾ ಸಂಘದ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಪೋರ್ಟ್ ಎಂದು ಮರುನಾಮಕರಣ ಮಾಡಿದ್ದಾರೆ.
ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ಮೂಲತಃ ಕೋಲ್ಕತ್ತದವರೇ ಆಗಿದ್ದಾರೆ. ಇಂದು ಕೋಲ್ಕತ್ತಾ ಪೋರ್ಟ್ ಟ್ರಸ್ಟ್ನ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿಯವರು ಮಹತ್ವದ ನಿರ್ಧಾರ ಪ್ರಕಟಿಸಿದರು.
ಡಾ. ಮುಖರ್ಜಿ ಭಾರತಿಯ ರಾಜಕಾರಣದ ದಂತಕಥೆಯಾಗಿದ್ದು, ಅವರು ಅಭಿವೃದ್ಧಿಯ ನಾಯಕರಾಗಿದ್ದರು ಮತ್ತು 'ಒಂದು ರಾಷ್ಟ್ರ, ಒಂದು ಸಂವಿಧಾನ' ಕಲ್ಪನೆಯ ಜಾರಿಗಾಗಿ ಗಿ ಮುಂಚೂಣಿಯಲ್ಲಿ ನಿಂತು ಹೋರಾಡಿದ ಮಾಹಾನ್ ನಾಯಕ . ಆ ಕಾರಣದಿಂದಲೇ ದೇಶದ ಬಹುಮುಖ್ಯ ಬಂದರಿಗೆ ಅವರ ಹೆಸರನ್ನಿಡಲಾಗಿದೆ ಎಂದರು.
ಈ ಬಂದರನ್ನು ಪೂರ್ವ ಭಾರತದ ಗೇಟ್ ವೇ ಎಂದು ಕರೆಯಲಾಗುತ್ತದೆ.
ಆದರೆ ಕೋಲ್ಕತ್ತ ಪೋರ್ಟ್ ಟ್ರಸ್ಟ್ನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳಲಿಲ್ಲ.
ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಮತ್ತೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 