ಕೊಲ್ಕತ್ತಾ ಪೋರ್ಟ್ಗೆ ಶ್ಯಾಮ್ ಪ್ರಸಾದ್ ಮುಖರ್ಜಿ ಹೆಸರು ಮರು ನಾಮಕರಣ
ಕೋಲ್ಕತ್ತಾ, ಜ 12: ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೊಲ್ಕತ್ತಾ ಪೋರ್ಟ್ ಟ್ರಸ್ಟ್ ಅನ್ನು ಭಾರತೀಯ ಜನಾ ಸಂಘದ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಪೋರ್ಟ್ ಎಂದು ಮರುನಾಮಕರಣ ಮಾಡಿದ್ದಾರೆ.
ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ಮೂಲತಃ ಕೋಲ್ಕತ್ತದವರೇ ಆಗಿದ್ದಾರೆ. ಇಂದು ಕೋಲ್ಕತ್ತಾ ಪೋರ್ಟ್ ಟ್ರಸ್ಟ್ನ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿಯವರು ಮಹತ್ವದ ನಿರ್ಧಾರ ಪ್ರಕಟಿಸಿದರು.
ಡಾ. ಮುಖರ್ಜಿ ಭಾರತಿಯ ರಾಜಕಾರಣದ ದಂತಕಥೆಯಾಗಿದ್ದು, ಅವರು ಅಭಿವೃದ್ಧಿಯ ನಾಯಕರಾಗಿದ್ದರು ಮತ್ತು 'ಒಂದು ರಾಷ್ಟ್ರ, ಒಂದು ಸಂವಿಧಾನ' ಕಲ್ಪನೆಯ ಜಾರಿಗಾಗಿ ಗಿ ಮುಂಚೂಣಿಯಲ್ಲಿ ನಿಂತು ಹೋರಾಡಿದ ಮಾಹಾನ್ ನಾಯಕ . ಆ ಕಾರಣದಿಂದಲೇ ದೇಶದ ಬಹುಮುಖ್ಯ ಬಂದರಿಗೆ ಅವರ ಹೆಸರನ್ನಿಡಲಾಗಿದೆ ಎಂದರು.
ಈ ಬಂದರನ್ನು ಪೂರ್ವ ಭಾರತದ ಗೇಟ್ ವೇ ಎಂದು ಕರೆಯಲಾಗುತ್ತದೆ.
ಆದರೆ ಕೋಲ್ಕತ್ತ ಪೋರ್ಟ್ ಟ್ರಸ್ಟ್ನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳಲಿಲ್ಲ.
ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಮತ್ತೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 