ಎಸ್ಡಿಎಂಸಿ ಅಧ್ಯಕ್ಷರಾಗಿ ಸಿದ್ದಯ್ಯ ಆಯ್ಕೆ
Siddaiah elected as SDMC president
ಹೂವಿನಹಡಗಲಿ 02: ತಾಲೂಕಿನ ಅಡವಿ ಮಲ್ಲನಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಸಿದ್ದಯ್ಯ ಪಿ.ಎಂ ಇವರನ್ನು ಎಸ್ಡಿಎಂಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಶಾಲೆಯ ಮುಖ್ಯ ಗುರುಗಳಾದ ಹುಗಲೂರು ವೀರಣ್ಣ ಮಾತನಾಡಿ "ಶಾಲಾ ಸುಧಾರಣೆ ಸಮಿತಿ"ಯಿಂದ ಶಾಲಾ ಬಿಟ್ಟ ಮಕ್ಕಳನ್ನು ಪುನ: ಶಾಲೆಗೆ ಕರೆ ತಂದು ಹಾಜರಾತಿ ಹೆಚ್ಚಿಸಲು ಒತ್ತು ನೀಡುತ್ತವೆ ಎಂದರು. ದೈಹಿಕ ಶಿಕ್ಷಕ ಪಂಚಪ್ಪ ಮಾತನಾಡಿ ನಮ್ಮ ಶಾಲೆಯ ಮಕ್ಕಳು ಪಾಠದ ಜತೆಗೆ ಕ್ರೀಡೆ, ಪ್ರತಿಭಾ ಕಾರಂಜಿಯಲ್ಲಿ ಎಲ್ಲಾ ರಂಗದಲ್ಲಿಉತ್ತಮ ಸಾಧನೆ ಮಾಡಿದ್ದಾರೆ ಎಂದರು. ಶಿಕ್ಷಕ ವಿಬಿ ಜಗದೀಶ್ ಮಾತನಾಡಿದರು.ಉಪಾಧ್ಯಕ್ಷೆ ಕೆ. ಶಾರದ ಆಯ್ಕೆಯಾದರು.ಈ ವೇಳೆ ಶಾಲೆಯ ನೂತನ ಎಸ್ಡಿಎಂಸಿ ರಚನಾ ಮಂಡಳಿಯ ಸರ್ವ ಸದಸ್ಯರು, ಮಾಜಿ ಎಸ್ಡಿಎಂಸಿ ಅಧ್ಯಕ್ಷರುಗಳಾದ ಯು.ಪಿ ಮಂಜುನಾಥ್, ಎಂ. ಕೊಟ್ರೇಶ್, ಗಡ್ಡಿ ವೀರಣ್ಣ, ಗ್ರಾಮಸ್ತರಾದ ಬಿ.ರಾಜಪ್ಪ, ಕೆ. ಬಸವರಾಜ, ಹೆಚ್. ಈಶಪ್ಪ, ಎಂ.ದೇವಪ್ಪ, ಎಕೆ ಮರಿಯಪ್ಪ, ಎಕೆ ಅಶೋಕ್, ಹೆಚ್. ಕವಿತಾ, ಪಿಎಂ ಮಲ್ಲಯ್ಯ, ಅತಿಥಿ ಶಿಕ್ಷಕ ಆನಂದ ಇಟ್ಟಿಗಿ ಹಾಗೂ ಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗದವರು, ಅಡುಗೆ ಸಿಬ್ಬಂದಿ ವರ್ಗ ಮತ್ತು ಮಕ್ಕಳಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 