ಸಿದ್ದಾಪುರ: ನೀರಿನ ಸಮಸ್ಯೆ: ಮತದಾನದಿಂದ ದೂರ ಉಳಿದ ಜನರು
ಲೋಕದರ್ಶನ ವರದಿ
ಸಿದ್ದಾಪುರ 23: ಸಿದ್ದಾಪುರ ಪಟ್ಟಣಕ್ಕೆ ಅರೆಂದೂರ ಹೊಳೆಯಿಂದ ನೀರು ಸರಬರಾಜು ಮಾಡುತ್ತಿರುವುದನ್ನು ವಿರೋದಿಸಿ ತಾಲೂಕಿನ ಅರೆಂದೂರಿ ಜನತೆ ಬೆಳಿಗ್ಗೆ 10.00 ಗಂಟೆಯಿಂದ ಮತದಾನದಿಂದ ದೂರ ಊಳಿದಿದ್ದರು. ಇದರಿಂದ ಆ ಭಾಗದಲ್ಲಿ ರೈತರು ಬೆಳೆದ ಭತ್ತ, ಕಬ್ಬು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಅರೆಂದೂರಿನ 357 ಗಂಡು, 309 ಹೆಣ್ಣು ಸೇರಿ ಒಟ್ಟು 666 ಮತದಾರರು ಮತದಾನ ಮಾಡಲಿಲ್ಲ. ಸಂಬಂದಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ನೀರಿನ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರೆ ಮಾತ್ರ ಮತದಾನ ಮಾಡುತ್ತೇವೆ ಎಂದು ಮತದಾರರು ಹೇಳಿದ್ದರು. ಸುಮಾರು 2 ಗಂಟೆಯ ವರೆಗೆ ಮತದಾನ ಕೇಂದ್ರತ್ತ ಮುಖ ಮಾಡಲಿಲ್ಲಾ. ಕೇವಲ 12 ಮತಗಳು ಮಾತ್ರ ಚಲಾವಣೆಯಾಗಿದ್ದವು. ನಂತರ ತಹಶೀಲ್ದಾರ ಗೀತಾ ಸಿ.ಜೆ ರವರು ಸ್ಥಳಕ್ಕೆ ಆಗಮಿಸಿ ವಾರಕ್ಕೆ 2 ದಿನ ಭತ್ತಕ್ಕೆ ನೀರು ಸರಬರಾಜು ಮಾಡುವ ಭರವಸೆ ನೀಡಿದ ನಂತರ ಮಧ್ಯಾಹ್ನ 2.30 ಗಂಟೆಯಿಂದ ಮತದಾರರು ಮತದಾನ ಮಾಡಲು ಪ್ರಾರಂಭಿಸಿರುತ್ತಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 