ಅನುಗ್ರಹ ಯೋಜನೆ ನಿಲ್ಲಿಸದಂತೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಏ.28, ಕುರಿ,ಮೇಕೆ,ಹಸು, ಎಮ್ಮೆ, ಎತ್ತು ಮುಂತಾದ ಜಾನುವಾರುಗಳು ಸತ್ತಾಗ ರೂ.ಹತ್ತುಸಾವಿರದ ವರೆಗೆ ಪರಿಹಾರ ನೀಡುವ 'ಅನುಗ್ರಹ"ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅದಕ್ಕೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು ರಾಮಕೃಷ್ಣಪ್ಪ ಎಂಬ ಕುರಿಗಾರರಿಗೆ ಸೇರಿದ ಸುಮಾರು 60 ಕುರಿಗಳು ಹೊಟ್ಟೆ ಒಡೆದು ಸುತ್ತಿವೆ. ಈ ರೀತಿಯ ಪ್ರಕರಣಗಳು ರಾಜ್ಯಾದ್ಯಂತ ಸಂಭವಿಸುತ್ತಿವೆ. ಇದರಿಂದ ಪಶುಪಾಲಕರು ತೀವ್ರ ರೀತಿಯ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ ಆಕಸ್ಮಿಕವಾಗಿ ಕುರಿ, ಮೇಕೆ, ಹಸು, ಎಮ್ಮೆ ಎತ್ತು ಮುಂತಾದ ಜಾನುವಾರುಗಳು ಸತ್ತರೆ ಗರಿಷ್ಠ 10 ಸಾವಿರ ರೂ.ವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಗೆ ತಂದಿದ್ದೆವು. ಇದು ಪರಿಣಾಮಕಾರಿಯಾಗಿತ್ತು. ಇದರಿಂದ ಪಶು ಪಾಲಕರಿಗೆ ಸಣ್ಣದೊಂದು ಭದ್ರತೆಯ ಭರವಸೆ ಇತ್ತು.ಈ ಯೋಜನೆಗೆ ನೂರಾರು ಕೋಟಿ ರೂ.ಅನುದಾನದ ಅವಶ್ಯಕತೆಯೂ ಇರುವುದಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಅನುಗ್ರಹ ಯೋಜನೆಯನ್ನು ನಿಲ್ಲಿಸಿ ಪಶುಪಾಲಕರ ವಿರೋಧಿ ನಿಲುವನ್ನು ಸರ್ಕಾರ ತೆಗೆದುಕೊಳ್ಳಬಾರದು. ರಾಮಕೃಷ್ಣಪ್ಪ ಮುಂತಾದ ಪಶುಪಾಲಕರಿಗೆ ಪರಿಹಾರವನ್ನು ತುರ್ತಾಗಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇನೆ. ಹಾಗೆಯೇ ಅನುಗ್ರಹ ಯೋಜನೆಗೆ ಈಹಣಕಸು ವರ್ಷದಲ್ಲಿ ಅನುದಾನ ನಿಗದಿ ಮಾಡಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 