ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ-ಎಚ್ ಡಿ ದೇವೇಗೌಡ
ಬೆಂಗಳೂರು, ಆ 22 ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ತೆರೆಮರೆಯಲ್ಲಿ ಸಹಕರಿಸಿದ್ದರು ಎಂಬ ಆರೋಪದ ಬೆನ್ನಲ್ಲೆ
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಲು ಸಿದ್ದರಾಮಯ್ಯ ಅವರೇ ಕಾರಣ ಎಂದು ನೇರವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಮೊದಲಿಂದಲೂ ತಿಕ್ಕಾಟ ಇತ್ತು.ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಬೇಕೆಂದು ಒತ್ತಾಯಿಸಿದ್ದರು. ಆದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ ಎಂದರು.
ಕುಮಾರಸ್ವಾಮಿ ಮುಖ್ಯಮಂತ್ತಿಯಾಗುವುದಕ್ಕೆ ತಮ್ಮ ಒಪ್ಪಿಗೆ ಇಲ್ಲ ಎಂಬುದನ್ನು ಸಿದ್ದರಾಮಯ್ಯ ಅವರ ಆಪ್ತರೇ ಹೇಳಿದ್ದಾರೆ. ಕಾಂಗ್ರೆಸ್ ಜೊತೆ ಪಕ್ಷ ಮೈತ್ರಿ ಮಾಡಿಕೊಂಡು ಸಕರ್ಾರ ನಡೆಸುತ್ತಿದ್ದ ಕುಮಾರಸ್ವಾಮಿಗೆ ದಿನನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಕಿರಿಕಿರಿ ನಡುವೆ ಸಕರ್ಾರ ರಚನೆ ನಡೆಸುತ್ತಿದ್ದ ಕುಮಾರಸ್ವಾಮಿಗೆ ಈಗ ನಿರಾಳರಾಗಿದ್ದಾರೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 