ಡಿಎಂಕೆ ಮೈತ್ರಿಕೂಟದಿಂದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ಸಹಿ ಸಂಗ್ರಹ ಅಭಿಯಾನ

ಡಿಎಂಕೆ ಮೈತ್ರಿಕೂಟದಿಂದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ಸಹಿ ಸಂಗ್ರಹ ಅಭಿಯಾನ

ಚೆನ್ನೈ, ಜ 23 :        ತಮಿಳುನಾಡಿನಲ್ಲಿ ಪ್ರತಿಪಕ್ಷ ಡಿಎಂಕೆ ನೇತೃತ್ವದ ಮೈತ್ರಿಕೂಟ ಫೆಬ್ರವರಿ ಎರಡರಿಂದ ಎಂಟರವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ  ಬೃಹತ್ ಸಹಿ ಅಭಿಯಾನವನ್ನು ಪ್ರಾರಂಭಿಸಲಿದೆ. 

ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಯಿತು.

ಸಭೆಯ ನಂತರ ಹೊರಡಿಸಲಾದ ಡಿಎಂಕೆ ಪ್ರಕಟಣೆಯಲ್ಲಿ, ಸಭೆಯಲ್ಲಿ ಪಾಲ್ಗೊಂಡ ಎಲ್ಲಾ ಸಂಸದರು ಸಹಿ ಹಾಕಿದ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದೆ.

ಸಭೆಯಲ್ಲಿ  ಸಿಎಎ ಅನ್ನು ರದ್ದುಗೊಳಿಸುವ ಪ್ರಶ್ನೆಯಿಲ್ಲ, ಎನ್ಆರ್‌ಸಿ ಮತ್ತು ಎನ್‌ಪಿಆರ್‌ ಅನ್ನು ಜಾರಿಗೆ ತಲಾಗುವುದು ಎಂಬ 

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಲಾಯಿತು.

ಸಂಸತ್ತಿನಲ್ಲಿ ಸಿಎಎಗೆ ಬೆಂಬಲ ನೀಡಿದ್ದಕ್ಕಾಗಿ ಆಡಳಿತಾರೂಢ ಎಐಎಡಿಎಂಕೆ ನಿಲುವನ್ನು ಖಂಡಿಸಲಾಯಿತು. ಸಿಎಎ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಸಿಎಎಯಲ್ಲಿ ಶ್ರೀಲಂಕಾದ ತಮಿಳರು ಮತ್ತು ಮುಸ್ಲಿಮರನ್ನು ಹೊರಗಿಡುವ ಮೂಲಕ ಅವರಿಗೆ ದ್ರೋಹ ಬಗೆದಿದೆ ಎಂದು ಅದು ಹೇಳಿದೆ.

ಸಿಎಎಯಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಹೇಳುವ ಮೂಲಕ ಎಐಎಡಿಎಂಕೆ ಪದೇ ಪದೇ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸುವುದಿಲ್ಲ ಎಂದು ಹೇಳುವ ಮೂಲಕ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ದ್ರೋಹ ಬಗೆದಿದೆ. ಕೇರಳ ಮತ್ತು ಪಂಜಾಬ್‌ನಲ್ಲಿ ಅಳವಡಿಸಿಕೊಂಡವರ ಪ್ರಕಾರ ರಾಜ್ಯ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

ಸಿಎಎ ಮೂಲಕ ಬಿಜೆಪಿ ಸರ್ಕಾರ ದೇಶದ ಜನರನ್ನು ವಿಭಜಿಸಲು ಮುಂದಾಗಿದೆ. ಎನ್‌ಪಿಆರ್‌ನಲ್ಲಿ ಕೇಳಲಾಗಿರುವ ಪ್ರಶ್ನೆಗಳು ಸಮರ್ಪಕವಾಗಿಲ್ಲ ಎಂದು ಅದು ಹೇಳಿದೆ.